September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿರುವ ನಗರಸಭಾ ವ್ಯಾಪ್ತಿಗೆ ಒಳಪಟ್ಟಿರುವ ಸೇತುವೆಯ ಮೇಲ್ಬಾಗದಲ್ಲಿ ಮಣ್ಣು ಮತ್ತು ಮರಳು ಸೇರಿ ಸೇತುವೆಯ ಮೇಲ್ಭಾಗದಲ್ಲಿ ನೀರು ಹರಿದುಹೋಗುವಂತಹ ರಂದ್ರಗಳು ಮುಚ್ಚಿ ಹೋಗಿದ್ದು ಮಳೆಯ ಸಂದರ್ಭದಲ್ಲಿ ಸೇತುವೆ ಮೇಲ್ಭಾಗದಲ್ಲಿ ಮಳೆ ನೀರು ನಿಂತು ಪಾದಾಚಾರಿಗಳಿಗೆ ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಿಗೆ ಸೇತುವೆ ಮೇಲೆ ನಡೆದುಕೊಂಡು ಹೋಗಲು ಬಹಳ ಕಷ್ಟಕರವಾಗದನ್ನು ಅರಿತ ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ಇವರ ಸೂಚನೆ ಯೊಂದಿಗೆ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 539 ನೆಯ ಸೇವಾ ಯೋಜನೆಯ ಶ್ರಮದಾನದ ಮೂಲಕ ಸಂಗ್ರಹವಾದ ಮಣ್ಣು ಹಾಗೂ ಮರಳುಗಳನ್ನು ತೆರವುಗೊಳಿಸಿ ಸೇತುವೆಯನ್ನು ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸೇತುವೆಯಲ್ಲಿ ಸಂಚರಿಸಿದ ಪಾದಾಚಾರಿಗಳು ಹಾಗೂ ವಾಹನ ಸವಾರರು ಸಂಘಟನೆ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ನಿಮ್ಮ ಈ ಸಮಾಜ ಸೇವೆಯ ಕಾರ್ಯಗಳು ಇನ್ನಷ್ಟು ನಿರಂತರವಾಗಿ ಮುನ್ನಡೆಯಲ್ಲಿ ಎಂದು ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಸುರೇಶ್ ಶೆಟ್ಟಿ, ರಾಘವೇಂದ್ರ, ರಾಜ ಕೇಸರಿ ಸಂಘಟನೆ ಅಧ್ಯಕ್ಷರಾದ ಸಂದೀಪ್, ರಾಜ ಕೇಸರಿ ಸಂಘಟನೆ ಸದಸ್ಯರುಗಳಾದ ಶಶಿಕಾಂತ್ , ರಾಮಣ್ಣ, ಗಣೇಶ್, ಕಿರಣ್, ಗಣೇಶ್, ಅಭಿಷೇಕ್, ಹರೀಶ್, ಕಿಶನ್, ಭರತ್, ಗಣೇಶ್ (ರಿಕ್ಷಾ), ಇವರೆಲ್ಲ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆ

Suddi Udaya
error: Content is protected !!