25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿರುವ ನಗರಸಭಾ ವ್ಯಾಪ್ತಿಗೆ ಒಳಪಟ್ಟಿರುವ ಸೇತುವೆಯ ಮೇಲ್ಬಾಗದಲ್ಲಿ ಮಣ್ಣು ಮತ್ತು ಮರಳು ಸೇರಿ ಸೇತುವೆಯ ಮೇಲ್ಭಾಗದಲ್ಲಿ ನೀರು ಹರಿದುಹೋಗುವಂತಹ ರಂದ್ರಗಳು ಮುಚ್ಚಿ ಹೋಗಿದ್ದು ಮಳೆಯ ಸಂದರ್ಭದಲ್ಲಿ ಸೇತುವೆ ಮೇಲ್ಭಾಗದಲ್ಲಿ ಮಳೆ ನೀರು ನಿಂತು ಪಾದಾಚಾರಿಗಳಿಗೆ ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಿಗೆ ಸೇತುವೆ ಮೇಲೆ ನಡೆದುಕೊಂಡು ಹೋಗಲು ಬಹಳ ಕಷ್ಟಕರವಾಗದನ್ನು ಅರಿತ ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ಇವರ ಸೂಚನೆ ಯೊಂದಿಗೆ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 539 ನೆಯ ಸೇವಾ ಯೋಜನೆಯ ಶ್ರಮದಾನದ ಮೂಲಕ ಸಂಗ್ರಹವಾದ ಮಣ್ಣು ಹಾಗೂ ಮರಳುಗಳನ್ನು ತೆರವುಗೊಳಿಸಿ ಸೇತುವೆಯನ್ನು ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸೇತುವೆಯಲ್ಲಿ ಸಂಚರಿಸಿದ ಪಾದಾಚಾರಿಗಳು ಹಾಗೂ ವಾಹನ ಸವಾರರು ಸಂಘಟನೆ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ನಿಮ್ಮ ಈ ಸಮಾಜ ಸೇವೆಯ ಕಾರ್ಯಗಳು ಇನ್ನಷ್ಟು ನಿರಂತರವಾಗಿ ಮುನ್ನಡೆಯಲ್ಲಿ ಎಂದು ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಸುರೇಶ್ ಶೆಟ್ಟಿ, ರಾಘವೇಂದ್ರ, ರಾಜ ಕೇಸರಿ ಸಂಘಟನೆ ಅಧ್ಯಕ್ಷರಾದ ಸಂದೀಪ್, ರಾಜ ಕೇಸರಿ ಸಂಘಟನೆ ಸದಸ್ಯರುಗಳಾದ ಶಶಿಕಾಂತ್ , ರಾಮಣ್ಣ, ಗಣೇಶ್, ಕಿರಣ್, ಗಣೇಶ್, ಅಭಿಷೇಕ್, ಹರೀಶ್, ಕಿಶನ್, ಭರತ್, ಗಣೇಶ್ (ರಿಕ್ಷಾ), ಇವರೆಲ್ಲ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya
error: Content is protected !!