22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿರುವ ನಗರಸಭಾ ವ್ಯಾಪ್ತಿಗೆ ಒಳಪಟ್ಟಿರುವ ಸೇತುವೆಯ ಮೇಲ್ಬಾಗದಲ್ಲಿ ಮಣ್ಣು ಮತ್ತು ಮರಳು ಸೇರಿ ಸೇತುವೆಯ ಮೇಲ್ಭಾಗದಲ್ಲಿ ನೀರು ಹರಿದುಹೋಗುವಂತಹ ರಂದ್ರಗಳು ಮುಚ್ಚಿ ಹೋಗಿದ್ದು ಮಳೆಯ ಸಂದರ್ಭದಲ್ಲಿ ಸೇತುವೆ ಮೇಲ್ಭಾಗದಲ್ಲಿ ಮಳೆ ನೀರು ನಿಂತು ಪಾದಾಚಾರಿಗಳಿಗೆ ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಿಗೆ ಸೇತುವೆ ಮೇಲೆ ನಡೆದುಕೊಂಡು ಹೋಗಲು ಬಹಳ ಕಷ್ಟಕರವಾಗದನ್ನು ಅರಿತ ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ಇವರ ಸೂಚನೆ ಯೊಂದಿಗೆ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 539 ನೆಯ ಸೇವಾ ಯೋಜನೆಯ ಶ್ರಮದಾನದ ಮೂಲಕ ಸಂಗ್ರಹವಾದ ಮಣ್ಣು ಹಾಗೂ ಮರಳುಗಳನ್ನು ತೆರವುಗೊಳಿಸಿ ಸೇತುವೆಯನ್ನು ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸೇತುವೆಯಲ್ಲಿ ಸಂಚರಿಸಿದ ಪಾದಾಚಾರಿಗಳು ಹಾಗೂ ವಾಹನ ಸವಾರರು ಸಂಘಟನೆ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ನಿಮ್ಮ ಈ ಸಮಾಜ ಸೇವೆಯ ಕಾರ್ಯಗಳು ಇನ್ನಷ್ಟು ನಿರಂತರವಾಗಿ ಮುನ್ನಡೆಯಲ್ಲಿ ಎಂದು ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಸುರೇಶ್ ಶೆಟ್ಟಿ, ರಾಘವೇಂದ್ರ, ರಾಜ ಕೇಸರಿ ಸಂಘಟನೆ ಅಧ್ಯಕ್ಷರಾದ ಸಂದೀಪ್, ರಾಜ ಕೇಸರಿ ಸಂಘಟನೆ ಸದಸ್ಯರುಗಳಾದ ಶಶಿಕಾಂತ್ , ರಾಮಣ್ಣ, ಗಣೇಶ್, ಕಿರಣ್, ಗಣೇಶ್, ಅಭಿಷೇಕ್, ಹರೀಶ್, ಕಿಶನ್, ಭರತ್, ಗಣೇಶ್ (ರಿಕ್ಷಾ), ಇವರೆಲ್ಲ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya
error: Content is protected !!