September 6, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

ಶಿರ್ಲಾಲು : ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಆರೋಗ್ಯ ನಿಧಿ, ವಿದ್ಯಾ ನಿಧಿ ಸಾಮಾಜಿಕವಾಗಿ ಹತ್ತು ಹಲವಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಸಂಚಲನ ಸಮಿತಿಯಿಂದ ಜೂ.19 ರಂದು ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಹೆಚ್ಚಿನ ಚಿಕಿತ್ಸೆಗಾಗಿ ಯುವವಾಹಿನಿ ಸಂಚಲನ ಸಮಿತಿಯ ಮಾಸಿಕ ಸಭೆಯಲ್ಲಿ ಸಹಾಯದ ಬೇಡಿಕೆ ಮನವಿ ಬಂದಿದ್ದು ತಕ್ಷಣ ಸ್ಪಂದಿಸಿದ ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಇದರ ಪದಾಧಿಕಾರಿಗಳು ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ಸಂಚಲನ ಸಮಿತಿಯ ಅಧ್ಯಕ್ಷ ಜಯಕುಮಾರ್ ಪೋಯ್ಯದಂಡ, ಕಾರ್ಯದರ್ಶಿ ಯಾತೀಶ್ ಕರಂಬಾರು, ಕೋಶಾಧಿಕಾರಿ ಶಿವಾನಂದ ತಾಲೂಕು ಯುವವಾಹಿನಿ ಘಟಕದ ಉಪಾಧ್ಯಕ್ಷರಾದ ಸದಾಶಿವ ಊರ, ಘಟಕದ ಕೋಶಾಧಿಕಾರಿ ವಿಜಯಕುಮಾರ್ ಹೇಡ್ಯದಡ್ಡ, ಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘ ಶಿರ್ಲಾಲು ಇದರ ಅಧ್ಯಕ್ಷರಾದ ಪ್ರವೀಣ್ ಪಾಲನೆ, ಯುವಬಿಲ್ಲವ ವೇದಿಕೆ ಅಧ್ಯಕ್ಷರಾದ ಹರೀಶ್ ಕಲ್ಲಾಜೆ, ಯುವವಾಹಿನಿ ಸಂಚಲನಸಮಿತಿ ಮಾಜಿ ಅಧ್ಯಕ್ಷರಾದ ಜ್ಣಾನೇಶ್ ಕಟ್ಟ, ರಂಜಿತ್ ಅಜಿರೋಳಿ, ಪ್ರಕಾಶ ಕಟ್ರಬೈಲು, ಪಂಚಾಯತ್ ಸದಸ್ಯರಾದ ಸೋಮನಾಥ ಬಳ್ಳಿದಡ್ಡ ,ದಿನೇಶ್ ಕರ್ದೋಟ್ಟು,ಸನತ್, ಶಶಿಕಾಂತ್ ಹಾಗು ಸಂಚಲನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!