22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

ಅಳದಂಗಡಿ: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನಾ ಸಮಾರಂಭವು ಜೂ.21 ರಂದು ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲ ಉದ್ಘಾಟಿಸಿ, ಸೂಳಬೆಟ್ಟು ಹಾ.ಉ.ಸ.ಸ ಅಧ್ಯಕ್ಷ ನಿರಂಜನ ಜೋಶಿ ಸಭಾಧ್ಯಕ್ಷತೆ ವಹಿಸಲಿರುವರು.

ಶಾಸಕ ಹರೀಶ್ ಪೂಂಜ ಕಚೇರಿ ಉದ್ಘಾಟಿಸಲಿದ್ದಾರೆ. ಮಂಗಳೂರು ದ.ಕ.ಸ.ಹಾ. ಅಧ್ಯಕ್ಷೆ ಸುಚರಿತ ಶೆಟ್ಟಿ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಆಡಳಿತ ಕೊಠಡಿಯ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾ. ಉಪಾಧ್ಯಕ್ಷ ಎಸ್.ಬಿ ಜಯರಾಮ ರೈ ಬಳಜ್ಜ ನೆರವೇರಿಸಲಿದ್ದಾರೆ. ನಾಮ ಫಲಕದ ಉದ್ಘಾಟನೆಯನ್ನು ಮಂಗಳೂರು ಹಾ.ಒಕ್ಕೂಟ ದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮಾಡಲಿದ್ದಾರೆ. ಪಶು ಆಹಾರ ಗೋದಾಮುವಿನ ಉದ್ಘಾಟನೆಯನ್ನು ಹಾ. ಒಕ್ಕೂಟದ ನಿರ್ದೇಶಕ ನಿರಂಜನ ಬಾವಂತಬೆಟ್ಟು ಮಾಡಲಿದ್ದಾರೆ. ಸಭಾ ಭವನದ ಉದ್ಘಾಟನೆಯನ್ನು ಹಾ. ಒಕ್ಕೂಟದ ನಿರ್ದೇಶಕ ಪದ್ಮಾನಾಭ ಶೆಟ್ಟಿ ಅರ್ಕಜೆ ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ನ ಸದಸ್ಯರಾದ ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಮಂಗಳೂರು ಹಾ.ಒಕ್ಕೂಟ ನಿರ್ದೇಶಕರುಗಳು ಭಾಗವಹಿಸಲಿದ್ದಾರೆಂದು ಸೂಳಬೆಟ್ಟು ಹಾ.ಉ.ಸ.ಸ ಅಧ್ಯಕ್ಷ ನಿರಂಜನ ಜೋಶಿ ತಿಳಿಸಿದ್ದಾರೆ.

Related posts

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

Suddi Udaya

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya
error: Content is protected !!