26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

ಅಳದಂಗಡಿ: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನಾ ಸಮಾರಂಭವು ಜೂ.21 ರಂದು ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲ ಉದ್ಘಾಟಿಸಿ, ಸೂಳಬೆಟ್ಟು ಹಾ.ಉ.ಸ.ಸ ಅಧ್ಯಕ್ಷ ನಿರಂಜನ ಜೋಶಿ ಸಭಾಧ್ಯಕ್ಷತೆ ವಹಿಸಲಿರುವರು.

ಶಾಸಕ ಹರೀಶ್ ಪೂಂಜ ಕಚೇರಿ ಉದ್ಘಾಟಿಸಲಿದ್ದಾರೆ. ಮಂಗಳೂರು ದ.ಕ.ಸ.ಹಾ. ಅಧ್ಯಕ್ಷೆ ಸುಚರಿತ ಶೆಟ್ಟಿ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಆಡಳಿತ ಕೊಠಡಿಯ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾ. ಉಪಾಧ್ಯಕ್ಷ ಎಸ್.ಬಿ ಜಯರಾಮ ರೈ ಬಳಜ್ಜ ನೆರವೇರಿಸಲಿದ್ದಾರೆ. ನಾಮ ಫಲಕದ ಉದ್ಘಾಟನೆಯನ್ನು ಮಂಗಳೂರು ಹಾ.ಒಕ್ಕೂಟ ದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮಾಡಲಿದ್ದಾರೆ. ಪಶು ಆಹಾರ ಗೋದಾಮುವಿನ ಉದ್ಘಾಟನೆಯನ್ನು ಹಾ. ಒಕ್ಕೂಟದ ನಿರ್ದೇಶಕ ನಿರಂಜನ ಬಾವಂತಬೆಟ್ಟು ಮಾಡಲಿದ್ದಾರೆ. ಸಭಾ ಭವನದ ಉದ್ಘಾಟನೆಯನ್ನು ಹಾ. ಒಕ್ಕೂಟದ ನಿರ್ದೇಶಕ ಪದ್ಮಾನಾಭ ಶೆಟ್ಟಿ ಅರ್ಕಜೆ ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ನ ಸದಸ್ಯರಾದ ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಮಂಗಳೂರು ಹಾ.ಒಕ್ಕೂಟ ನಿರ್ದೇಶಕರುಗಳು ಭಾಗವಹಿಸಲಿದ್ದಾರೆಂದು ಸೂಳಬೆಟ್ಟು ಹಾ.ಉ.ಸ.ಸ ಅಧ್ಯಕ್ಷ ನಿರಂಜನ ಜೋಶಿ ತಿಳಿಸಿದ್ದಾರೆ.

Related posts

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!