May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

ಉಜಿರೆ: ಉಜಿರೆಯ ಹಿರಿಯರೂ ,ಹಿಂದೂ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದ  ಕೀರ್ತಿಶೇಷ ವಿಜಯ ರಾಘವ ಪಡುವೆಟ್ನಾಯರು ಹಾಕಿಕೊಟ್ಟ ಸನ್ಮಾರ್ಗದಂತೆ  ಹಾಗೂ ಪ್ರತಿ ವರ್ಷದ ಆಚರಣೆಯಂತೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಮತ್ತು  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ವತಿಯಿಂದ  ಈ ವರ್ಷವೂ  ಆಷಾಢ ಪ್ರಥಮೈಕಾದಶೀ ಪ್ರಯುಕ್ತ ಜೂ  29 ರಂದು  ಗುರುವಾರ  ಬೆಳಿಗ್ಗೆ 7.30ಕ್ಕೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಪರಮ ಪೂಜ್ಯ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳವರಿಂದ  ” ತಪ್ತಮುದ್ರಾ ಧಾರಣೆ” ಕಾರ್ಯಕ್ರಮ ಜರಗಲಿದೆ.
   ಆಸಕ್ತ ಭಗವದ್ಭಕ್ತರು  ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಪ್ತ ಮುದ್ರಾಧಾರಣೆಯಲ್ಲಿ ಪಾಲ್ಗೊಂಡು ಶ್ರೀ ಭಗವ೦ತಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ  ಶರತ್ ಕೃಷ್ಣ ಪಡುವೆಟ್ನಾಯರು ಮತ್ತು  ತುಳು ಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು  ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya
error: Content is protected !!