23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

ಉಜಿರೆ: ಉಜಿರೆಯ ಹಿರಿಯರೂ ,ಹಿಂದೂ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದ  ಕೀರ್ತಿಶೇಷ ವಿಜಯ ರಾಘವ ಪಡುವೆಟ್ನಾಯರು ಹಾಕಿಕೊಟ್ಟ ಸನ್ಮಾರ್ಗದಂತೆ  ಹಾಗೂ ಪ್ರತಿ ವರ್ಷದ ಆಚರಣೆಯಂತೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಮತ್ತು  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ವತಿಯಿಂದ  ಈ ವರ್ಷವೂ  ಆಷಾಢ ಪ್ರಥಮೈಕಾದಶೀ ಪ್ರಯುಕ್ತ ಜೂ  29 ರಂದು  ಗುರುವಾರ  ಬೆಳಿಗ್ಗೆ 7.30ಕ್ಕೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಪರಮ ಪೂಜ್ಯ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳವರಿಂದ  ” ತಪ್ತಮುದ್ರಾ ಧಾರಣೆ” ಕಾರ್ಯಕ್ರಮ ಜರಗಲಿದೆ.
   ಆಸಕ್ತ ಭಗವದ್ಭಕ್ತರು  ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಪ್ತ ಮುದ್ರಾಧಾರಣೆಯಲ್ಲಿ ಪಾಲ್ಗೊಂಡು ಶ್ರೀ ಭಗವ೦ತಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ  ಶರತ್ ಕೃಷ್ಣ ಪಡುವೆಟ್ನಾಯರು ಮತ್ತು  ತುಳು ಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು  ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

Related posts

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya
error: Content is protected !!