22.7 C
ಪುತ್ತೂರು, ಬೆಳ್ತಂಗಡಿ
March 31, 2025
ತಾಲೂಕು ಸುದ್ದಿವರದಿ

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

ಉರುವಾಲುಪದವು : ಶ್ರೀ ಮಹಮ್ಮಾಯಿ ಕ್ಷೇತ್ರ ಸೇವಾ ಟ್ರಸ್ಟ್ ಶಿವಾಜಿ ನಗರ ಉರುವಾಲುಪದವು ಇದರ ಟ್ರಸ್ಟ್‌ನ ಪದಾಧಿಕಾರಿಗಳ ಮತ್ತು ಕ್ಷೇತ್ರಕ್ಕೆ ಸಹಕರಿಸುವ ಸಂಘ-ಸಂಸ್ಥೆಗಳ ಜಂಟಿ ಸಭೆಯು ಜೂ.18 ರಂದು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟಿನ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉರುವಾಲು ವಿಭಾಗದ ಮೇಲ್ವಿಚಾರಕರಾದ ಶಿವಾನಂದ ಇವರು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಾ ಟ್ರಸ್ಟಿನ ಸಭೆಗೆ ಸಹಕರಿಸುವ ಸಂಘ- ಸಂಸ್ಥೆಗಳ ಅಧ್ಯಕ್ಷ, ಕಾರ್ಯದರ್ಶಿಗಳ ಜಂಟಿ ಸಭೆಯನ್ನು ನಡೆಸಿದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಾ ಜೂ.30 ಶುಕ್ರವಾರ ಮಹಮ್ಮಾಯಿ ದೇವಾಸ್ಥಾನದ ವಠಾರದಲ್ಲಿ ನಡೆಯುವ ವನಮಹೋತ್ಸವ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಟ್ರಸ್ಟಿನ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಪ್ಪೆಟಿ ಒಕ್ಕೂಟದ ಅಧ್ಯಕ್ಷರಾದ ರಾಮಣ್ಣ ಗೌಡ, ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸಹ ಮೊಕ್ತೇಸರರಾದ ಜನಾರ್ಧನ ಗೌಡ ನಾಕಾಲು ಮತ್ತು ಸೇಸಪ್ಪ ರೈ ಕೊರಿಂಜ, ಶ್ರೀ ವಿಶ್ವೇಶ್ವರ ಭಜನಾ ಮಂಡಳಿ ಕಾರಿಂಜ ಇದರ ವತಿಯಿಂದ ಪ್ರದೀಪ್‌ ನಾಯ್ಕ, ಶ್ರೀ ಸತ್ಯನಾರಾಯಣ ಭಜನಾ ಮಂದಿರ ಉರುವಾಲು ಇದರ ಅಧ್ಯಕ್ಷರಾದ ಯೋಗೀಶ್‌ ಗೌಡ ಕಜೆ, ಕಾರ್ಯದರ್ಶಿ ರ೦ಜಿತ್ ಧರ್ಮಾಡಿ, ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ ಉರುವಾಲು ಇದರ ಅಧ್ಯಕ್ಷರಾದ ಸೀತಾರಾಮ ನಾಯ್ಕ ಅರ್ಬಿ, ಕಾರ್ಯದರ್ಶಿಯಾದ ಉಮೇಶ ನಾಯ್ಕ ಎಂಜಿರಪಳಿಕೆ ಹಾಗೂ ಸೀತಾರಾಮ ಬಿ.ಎಸ್ ಬೆಳಾಲು, ಜಯರಾಮ ನಾಯ್ಕ ಹಲೇಜಿ, ಕಾಂತಪ್ಪ ನಾಯ್ಕ ತಾಳಿಂಜ ಉಪಸ್ಥಿತರಿದ್ದು ಕ್ಷೇತ್ರದ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಹಕರಿಸುವ ಸಂಘ-ಸಂಸ್ಥೆಗಳ ಜಂಟಿ ಸಭೆಯನ್ನು ನಡೆಸಿದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಹಾಗೂ ಕ್ಷೇತ್ರದಲ್ಲಿ ನಡೆಯುವ ವನಮಹೋತ್ಸವ ಕಾರ್ಯಕ್ರಮ ಹಾಗೂ ಕ್ಷೇತ್ರದಲ್ಲಿ ನಡೆಯುವ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಟ್ರಸ್ಟ್‌ನ ಅಧ್ಯಕ್ಷರು ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರದೀಪ್ ನಾಯ್ಕ ಇವರು ಧನ್ಯವಾದವಿತ್ತರು.

Related posts

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya
error: Content is protected !!