ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಉಜಿರೆ: ಕೆಎಂಎಫ್ ಅಧ್ಯಕ್ಷ, ಕಾರ್ಯದರ್ಶಿ, ವಿಸ್ತರಣಾಧಿಕಾರಿ, ನಿರ್ದೇಶಕರು, ಕಡಿರುದ್ಯಾವರ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಬೆಳ್ತಂಗಡಿ ಪಶು ವೈದ್ಯ ಸೇವಾ ಇಲಾಖೆ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾಲಯ ಇದರ ವ್ಯಾಪ್ತಿಯ ಕಡಿರುದ್ಯಾವರ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕಾ ಶಿಬಿರ ಜೂ. 19 ರಂದು ನಡೆಯಿತು.

ಒಟ್ಟು ಎಂಟು ತಂಡಗಳಲ್ಲಿ 900 ಜಾನುವಾರುಗಳಿಗೆ ಲಸಿಕೆ ನೀಡಲಾಯಿತು.
ಜೂ.20 ರಂದು ಮುಂಡಾಜೆ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಮುಂಡಾಜೆ ಗ್ರಾಮದಲ್ಲಿ ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ.

Leave a Comment

error: Content is protected !!