ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಗ್ರಾಮ ಪಂಚಾಯಿತಿ ಚಾರ್ಮಾಡಿ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಧನರಾದ ಒಕ್ಕೂಟದ ಕಾರ್ಯದರ್ಶಿ ಮತ್ತು ಸ್ವಚ್ಛ ಸಂಕೀರ್ಣ ಘಟಕದ ಮೇಲ್ವಿಚಾರಕಿ ಒಕ್ಕೂಟದ ಸಕ್ರಿಯ ಕೆಲಸಗಳಲ್ಲಿ ಗುರುತಿಸಿಕೊಂಡ ಶ್ರೀಮತಿ ತೇಜಶ್ರೀರವರಿಗೆ ಮೌನ ಪ್ರಾರ್ಥನೆ ಮೂಲಕ ಗೌರವ ನಮನವನ್ನು ಸಲ್ಲಿಸಲಾಯಿತು.

ಈ ಸಭೆಯಲ್ಲಿ ಒಕ್ಕೂಟದಲ್ಲಿ ಕಾರ್ಯನಿರ್ವಹಿಸಲು ವಿವಿಧ ಸಖಿ ಗಳ ಆಯ್ಕೆ ಲೋಕೋಸ್ ಪ್ರಗತಿ, ಸರಕಾರದ ಆದೇಶಗಳ ಕುರಿತು ಚರ್ಚೆ ಸಂಘಟನೆಯಿಂದ ಸಮೃದ್ಧಿ ಅಭಿಯಾನ ಕಾರ್ಯಕ್ರಮದಡಿ ಹೊಸ ಸಂಘಗಳನ್ನು ರಚಿಸುವ ಕುರಿತು ಮಾಹಿತಿ, ಮುಂದಿನ ತಿಂಗಳು ಮಹಾಸಭೆಯನ್ನು ನಡೆಸುವ ದಿನಾಂಕವನ್ನು ನಿಗದಿಪಡಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಜಯಂತಿ ಕೋಶಾಧಿಕಾರಿ ಪ್ರೇಮ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾರದಾ, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎಂಬಿಕೆ ಭವ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ರಮ್ಯಾ ರವರು ಧನ್ಯವಾದ ವಿತ್ತರು.

Leave a Comment

error: Content is protected !!