22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

ಹತ್ಯಡ್ಕ : ಹತ್ಯಡ್ಕ ಗ್ರಾಮದ ದರ್ಭೆತಡ್ಕ ಸುದೆಗಂಡಿ ಕಪಿಲಾನದಿ ಕಿರು ಸೇತುವೆಯು ಶಿಥಿಲಾವಸ್ಥೆಯಲ್ಲಿರುವುದರಿಂದ ಅದರ ದುರಸ್ತಿ ಕೆಲಸ ನಡೆಸುವ ಬಗ್ಗೆ ದರ್ಭೆತಡ್ಕ ಶ್ರೀ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಜೂ.19 ರಂದು ನಡೆಯಿತು.
ಅರಸಿನಮಕ್ಕಿ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಸೌಮ್ಯಾ ತುಳುಪುಳೆ ಹಾಜರಿದ್ದರು.


ಈ ಸಂದರ್ಭದಲ್ಲಿ ಕಪಿಲಾನದಿ ಸೇತುವೆ ದುರಸ್ತಿ ಸಮಿತಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಕರುಣಾಕರ ಗೋಗಟೆ ಹೊಸ್ಮಠ. ಕಾರ್‍ಯದರ್ಶಿಯಾಗಿ ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ ಆಯ್ಕೆಯಾದರು. ಶೀಘ್ರದಲ್ಲಿ ಪಂಚಾಯತ್ ಗ್ರಾಮಸ್ಥರ ಸಹಕಾರದೊಂದಿಗೆ ಸೇತುವೆ ದುರಸ್ತಿ ಕೆಲಸ ಮಾಡುವುದೆಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಜೋಸೆಫ್ ಪಿರೇರಾ, ವೆಂಕಟೇಶ ಮೆಹೆಂದಳೆ, ಕಾಶಿನಾಥ ಗೋಗಟೆ, ವಾಮನ ತಾಮ್ಹನ್‌ಕರ್, ಧರ್ಮರಾಜ ಗೌಡ, ನರಸಿಂಹ ಪಾಳಂದೆ, ಉದಯಕುಮಾರ್ ಅಭ್ಯಂಕರ್, ವರದಶಂಕರ ದಾಮ್ಲೆ, ರಾಜೇಶ್ ಬೊಳ್ಳೋಡಿ ಉಪಸ್ಥಿತರಿದ್ದರು.

Related posts

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya
error: Content is protected !!