23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

ಬಂದಾರು : ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿ ಬಾಲಕಿಯೋರ್ವಳನ್ನು ರಿಕ್ಷಾದಲ್ಲಿ ಕರೆದೊಯ್ದು ಮಾನಭಂಗಕ್ಕೆ ಯತ್ನ ನಡೆಸಿದ ಆರೋಪದಲ್ಲಿ ರಿಕ್ಷಾ ಚಾಲಕ ಮತ್ತು ಇನ್ನೋರ್ವನ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿನ ನಿವಾಸಿ ಕರೀಂ ಮತ್ತು
ರಿಕ್ಷಾ ಚಾಲಕ ಸಾದಿಕ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ೧೫ ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
೧೭ ವರ್ಷದ ಬಾಲಕಿ ಜೂ. ೧೮ ರಂದು ತಾಯಿಯ ಪರವಾಗಿ ಸ್ವ ಸಹಾಯ ಸಂಘದ ಹಣ ಕಟ್ಟಲು ನಡೆದುಕೊಂಡು ಹೋಗುತ್ತಿದ್ದಾಗ ಕುಂಟಾಲಪಲ್ಕೆ ನೇರೋಳ್ದಪಲ್ಕೆ ಎಂಬಲ್ಲಿ ರಿಕ್ಷಾ ಚಾಲಕ ಸಾದಿಕ್ ಮತ್ತು ಪರಿಚಿತ ವ್ಯಕ್ತಿ ಕರೀಂ, ಬಾಲಕಿಯನ್ನು ದುರುಪಯೋಗಪಡಿಸಲು ಯತ್ನ ನಡೆಸಿದ್ದರು. ಅದಕ್ಕೂ ಮುನ್ನ ಬಾಲಕಿಗೆ ಕರೀಂ, ೨೦೦ ರೂ. ನೀಡಿ ರಿಕ್ಷಾದಲ್ಲಿ ಬೆಳ್ತಂಗಡಿಗೆ ಬರುವಂತೆ ಕರೆದಿದ್ದು, ಅದಕ್ಕೆ ಆಕೆ ನಿರಾಕರಿಸಿದ ವೇಳೆ ಕರೀಂ ಆಕೆಯ ದೇಹದ ಭಾಗಕ್ಕೆ ಕೈ ಹಾಕಿದ್ದು, ಆಕೆ ಆಟೋ ರಿಕ್ಷಾದಿಂದ ಜಿಗಿದು ಅವರಿಂದ ತಪ್ಪಿಸಿಕೊಂಡಿದ್ದಳು. ಈ ವೇಳೆ ಆಕೆಯ ಕಾಲು ಮತ್ತು ಕೈಗೆ ಗಾಯವಾಗಿದೆ. ಈ ವೇಳೆ ಆರೋಪಿಗಳು ರಿಕ್ಷಾ ನಿಲ್ಲಿಸದೆ ಪರಾರಿಯಾಗಿದ್ದರು. ಬಾಲಕಿ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ಆರೋಪಿಗಳನ್ನು ಬಂಧಿಸಲಾಗಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!