23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ಮುಂಡಾಜೆ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಜೂ.೨೦ ರಂದು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಆಪ್ತ ಸಮಾಲೋಚಕರು ಆಗಿರುವ ರಮ್ಯ ಇವರು ಜಾಗೃತಿ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ರೂಪಲತಾ ಸಹಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಡಿಸೋಜಾ ವಹಿಸಿಕೊಂಡರು. ಕಾಲೇಜಿನ ಜೂನಿಯರ್ ರೆಡ್‌ಕ್ರಾಸ್ ವಿಭಾಗದ ಸಂಯೋಜಕರಾಗಿರುವ ಪುರುಷೋತ್ತಮ ಶೆಟ್ಟಿ ಕಾರ್ಯಕ್ರಮವನ್ನು ಸಂಘಟಿಸಿದರು. ಉಪನ್ಯಾಸಕಿ ನಮಿತಾ ವಂದಿಸಿದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya
error: Content is protected !!