25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

ಬಂದಾರು : ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿ ಬಾಲಕಿಯೋರ್ವಳನ್ನು ರಿಕ್ಷಾದಲ್ಲಿ ಕರೆದೊಯ್ದು ಮಾನಭಂಗಕ್ಕೆ ಯತ್ನ ನಡೆಸಿದ ಆರೋಪದಲ್ಲಿ ರಿಕ್ಷಾ ಚಾಲಕ ಮತ್ತು ಇನ್ನೋರ್ವನ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿನ ನಿವಾಸಿ ಕರೀಂ ಮತ್ತು
ರಿಕ್ಷಾ ಚಾಲಕ ಸಾದಿಕ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ೧೫ ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
೧೭ ವರ್ಷದ ಬಾಲಕಿ ಜೂ. ೧೮ ರಂದು ತಾಯಿಯ ಪರವಾಗಿ ಸ್ವ ಸಹಾಯ ಸಂಘದ ಹಣ ಕಟ್ಟಲು ನಡೆದುಕೊಂಡು ಹೋಗುತ್ತಿದ್ದಾಗ ಕುಂಟಾಲಪಲ್ಕೆ ನೇರೋಳ್ದಪಲ್ಕೆ ಎಂಬಲ್ಲಿ ರಿಕ್ಷಾ ಚಾಲಕ ಸಾದಿಕ್ ಮತ್ತು ಪರಿಚಿತ ವ್ಯಕ್ತಿ ಕರೀಂ, ಬಾಲಕಿಯನ್ನು ದುರುಪಯೋಗಪಡಿಸಲು ಯತ್ನ ನಡೆಸಿದ್ದರು. ಅದಕ್ಕೂ ಮುನ್ನ ಬಾಲಕಿಗೆ ಕರೀಂ, ೨೦೦ ರೂ. ನೀಡಿ ರಿಕ್ಷಾದಲ್ಲಿ ಬೆಳ್ತಂಗಡಿಗೆ ಬರುವಂತೆ ಕರೆದಿದ್ದು, ಅದಕ್ಕೆ ಆಕೆ ನಿರಾಕರಿಸಿದ ವೇಳೆ ಕರೀಂ ಆಕೆಯ ದೇಹದ ಭಾಗಕ್ಕೆ ಕೈ ಹಾಕಿದ್ದು, ಆಕೆ ಆಟೋ ರಿಕ್ಷಾದಿಂದ ಜಿಗಿದು ಅವರಿಂದ ತಪ್ಪಿಸಿಕೊಂಡಿದ್ದಳು. ಈ ವೇಳೆ ಆಕೆಯ ಕಾಲು ಮತ್ತು ಕೈಗೆ ಗಾಯವಾಗಿದೆ. ಈ ವೇಳೆ ಆರೋಪಿಗಳು ರಿಕ್ಷಾ ನಿಲ್ಲಿಸದೆ ಪರಾರಿಯಾಗಿದ್ದರು. ಬಾಲಕಿ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ಆರೋಪಿಗಳನ್ನು ಬಂಧಿಸಲಾಗಿದೆ.

Related posts

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya
error: Content is protected !!