April 2, 2025
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

ಸೂಳಬೆಟ್ಟು : ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಹಾಗೂ ಇಲ್ಲಿನ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರು ರೋಟರಿ ಕ್ಲಬ್ ಬೆಳ್ತಂಗಡಿ ಮೂಲಕ ಪುಸ್ತಕಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ಜೂ 20 ರಂದು ವಿತರಿಸಿದರು.
15 ನೇ ವರ್ಷದ ಈ ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿಯ ನಿಯೋಜಿತ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಉದ್ಘಾಟಿಸಿ, ಡೋಂಗ್ರೆ ಕುಟುಂಬದವರು ಸಮಾಜದ ಏಳಿಗೆಗಾಗಿ ಸಂಪಾದನೆಯ ಒಂದು ಭಾಗವನ್ನು ವಿನಿಯೋಗಿಸುವ ಮನೋಭಾವವನ್ನು ಇಟ್ಟುಕೊಂಡಿರುವುದು ಮಾದರಿಯಾಗಿದೆ ಎಂದರು.
ರೋಟರಿಯ ನಿಯೋಜಿತ ಕಾರ್ಯದರ್ಶಿ ವಿದ್ಯಾಕುಮಾರ್, ಡಾ| ಸುಷ್ಮಾ ಡೋಂಗ್ರೆ, ಗ್ತಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ ಅತಿಥಿಗಳಾಗಿದ್ದರು.


ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು.
ಶಾಲಾ ಸಹ ಶಿಕ್ಷಕಿ ಉಮೈಬಾ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ, ಸಿಬ್ಬಂದಿಗಳಾದ ಲವಿನಾ, ಮಮತಾ, ಚಿತ್ರಾಕ್ಷಿ ಸಹಕರಿಸಿದರು.
ಮಕ್ಕಳಿಗೆ ಪುಸ್ತಕ, ಚೀಲ, ಕೊಡೆ ಇತ್ಯಾದಿಗಳ ಕೊಡುಗೆಗಳನ್ನು ನೀಡಿದ ಡಾ| ಶಶಿಧರ ಡೋಂಗ್ರೆ ಪ್ರಸ್ತಾವಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ವೇಗಸ್ ಸ್ವಾಗತಿಸಿ ವಂದಿಸಿದರು.

Related posts

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya
error: Content is protected !!