22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

ಸೂಳಬೆಟ್ಟು : ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಹಾಗೂ ಇಲ್ಲಿನ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರು ರೋಟರಿ ಕ್ಲಬ್ ಬೆಳ್ತಂಗಡಿ ಮೂಲಕ ಪುಸ್ತಕಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ಜೂ 20 ರಂದು ವಿತರಿಸಿದರು.
15 ನೇ ವರ್ಷದ ಈ ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿಯ ನಿಯೋಜಿತ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಉದ್ಘಾಟಿಸಿ, ಡೋಂಗ್ರೆ ಕುಟುಂಬದವರು ಸಮಾಜದ ಏಳಿಗೆಗಾಗಿ ಸಂಪಾದನೆಯ ಒಂದು ಭಾಗವನ್ನು ವಿನಿಯೋಗಿಸುವ ಮನೋಭಾವವನ್ನು ಇಟ್ಟುಕೊಂಡಿರುವುದು ಮಾದರಿಯಾಗಿದೆ ಎಂದರು.
ರೋಟರಿಯ ನಿಯೋಜಿತ ಕಾರ್ಯದರ್ಶಿ ವಿದ್ಯಾಕುಮಾರ್, ಡಾ| ಸುಷ್ಮಾ ಡೋಂಗ್ರೆ, ಗ್ತಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ ಅತಿಥಿಗಳಾಗಿದ್ದರು.


ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು.
ಶಾಲಾ ಸಹ ಶಿಕ್ಷಕಿ ಉಮೈಬಾ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ, ಸಿಬ್ಬಂದಿಗಳಾದ ಲವಿನಾ, ಮಮತಾ, ಚಿತ್ರಾಕ್ಷಿ ಸಹಕರಿಸಿದರು.
ಮಕ್ಕಳಿಗೆ ಪುಸ್ತಕ, ಚೀಲ, ಕೊಡೆ ಇತ್ಯಾದಿಗಳ ಕೊಡುಗೆಗಳನ್ನು ನೀಡಿದ ಡಾ| ಶಶಿಧರ ಡೋಂಗ್ರೆ ಪ್ರಸ್ತಾವಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ವೇಗಸ್ ಸ್ವಾಗತಿಸಿ ವಂದಿಸಿದರು.

Related posts

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ಏರಿಸಿ: ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!