25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಳ್ತಂಗಡಿ: ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯಕ್ಕೆ ಕೇಂದ್ರ ಸರಕಾರ ಅಕ್ಕಿ ಕೊಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅನ್ನದ ತಟ್ಟೆ ಬಡಿಯುವ ಪ್ರತಿಭಟನೆ ಜೂ.20 ರಂದು ಬೆಳ್ತಂಗಡಿ ಮಿನಿವಿಧಾನ ಸೌಧದ ಎದರು ನಡೆದು ನಂತರ ಅಕ್ಕಿ ಒದಗಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.


ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಗೃಹಲಕ್ಷ್ಮೀ ಮತ್ತು ಭಾಗ್ಯಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾಜಿ ಶಾಸಕ ವಸಂತ ಬಂಗೇರರ ನೇತೃತ್ವದಲ್ಲಿ ಕಾರ್ಯಕರ್ತರು ‘ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ಕೊಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಅನ್ನದ ತಟ್ಟೆಯನ್ನು ಕೈಯಲ್ಲಿ ಹಿಡಿದು ಬಡಿಯುತ್ತಾ ರಸ್ತೆಯ ಮೂಲಕ ಮೆರವಣಿಗೆಯಲ್ಲಿ ಮಿನಿ ವಿಧಾನ ಸೌಧಕ್ಕೆ ತೆರಳಿದರು. ಅಲ್ಲಿ ತಟ್ಟೆ ಬಡಿದು ಪ್ರತಿಭಟನೆ ವ್ಯಕ್ತಪಡಿಸಿ, ನಂತರ ಅನ್ನ ಭಾಗ್ಯಕ್ಕೆ ಅಕ್ಕಿಯನ್ನು ಒದಗಿಸುವಂತೆ ಪ್ರಧಾನಿಯವರಿಗೆ ತಹಸೀಲ್ದಾರ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ , ಜಿ.ಪಂ. ಮಾಜಿ ಸದಸ್ಯರಾದ ಶೇಖರ್ ಕುಕ್ಕೇಡಿ, ನಮೀತಾ ಪೂಜಾರಿ, ಹಿರಿಯರಾದ ರಾಜು ಪೂಜಾರಿ ಕಾಶಿಪಟ್ನ , ಶ್ರೀನಿವಾಸ್ ಉಜಿರೆ ,ಸತೀಶ್ ಕೆ ಕಾಶಿಪಟ್ನ, ಜಯವಿಕ್ರಂ, ಅಬ್ದುಲ್ ಕರೀಂ ಗೇರುಕಟ್ಟೆ ,ಸತೀಶ್ ಹೆಗ್ಡೆ ವೇಣೂರು ,ಅರವಿಂದ ಶೆಟ್ಟಿ ಖಂಡಿಗ ,ಹರೀಶ್ ಪೊಕ್ಕಿ ,ರಮೇಶ್ ಪಡ್ಡಯಿಮಜಲು, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶ್ರೀಮತಿ ವಂದನಾ ಭಂಡಾರಿ, ಜೆಸಿಂತಾ ಮೋನಿಸ್, ಹರಿಪ್ರಸಾದ್ ಹೊಸಂಗಡಿ ,ಮುಖಂಡರಾದ ಅಯೂಬ್ ಡಿ.ಕೆ ಕಲ್ಲೇರಿ, ವಿನ್ಸೆಂಟ್ ಡಿ ಸೋಜ ಮಡಂತ್ಯಾರು ,ಇಸ್ಮಾಯಿಲ್ ಕೆ ಪೆರಿಂಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್, ಮರಿತ ಪಿಂಟೋ ,ಪ್ರವೀಣ್ ಗೌಡ ,ಅಶ್ರಫ್ ಶಾಂತಿನಗರ , ಸೇರಿದಂತೆ ಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಪಾಲ್ಗೊಂಡರು.

Related posts

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!