23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಳ್ತಂಗಡಿ: ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯಕ್ಕೆ ಕೇಂದ್ರ ಸರಕಾರ ಅಕ್ಕಿ ಕೊಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅನ್ನದ ತಟ್ಟೆ ಬಡಿಯುವ ಪ್ರತಿಭಟನೆ ಜೂ.20 ರಂದು ಬೆಳ್ತಂಗಡಿ ಮಿನಿವಿಧಾನ ಸೌಧದ ಎದರು ನಡೆದು ನಂತರ ಅಕ್ಕಿ ಒದಗಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.


ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಗೃಹಲಕ್ಷ್ಮೀ ಮತ್ತು ಭಾಗ್ಯಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾಜಿ ಶಾಸಕ ವಸಂತ ಬಂಗೇರರ ನೇತೃತ್ವದಲ್ಲಿ ಕಾರ್ಯಕರ್ತರು ‘ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ಕೊಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಅನ್ನದ ತಟ್ಟೆಯನ್ನು ಕೈಯಲ್ಲಿ ಹಿಡಿದು ಬಡಿಯುತ್ತಾ ರಸ್ತೆಯ ಮೂಲಕ ಮೆರವಣಿಗೆಯಲ್ಲಿ ಮಿನಿ ವಿಧಾನ ಸೌಧಕ್ಕೆ ತೆರಳಿದರು. ಅಲ್ಲಿ ತಟ್ಟೆ ಬಡಿದು ಪ್ರತಿಭಟನೆ ವ್ಯಕ್ತಪಡಿಸಿ, ನಂತರ ಅನ್ನ ಭಾಗ್ಯಕ್ಕೆ ಅಕ್ಕಿಯನ್ನು ಒದಗಿಸುವಂತೆ ಪ್ರಧಾನಿಯವರಿಗೆ ತಹಸೀಲ್ದಾರ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ , ಜಿ.ಪಂ. ಮಾಜಿ ಸದಸ್ಯರಾದ ಶೇಖರ್ ಕುಕ್ಕೇಡಿ, ನಮೀತಾ ಪೂಜಾರಿ, ಹಿರಿಯರಾದ ರಾಜು ಪೂಜಾರಿ ಕಾಶಿಪಟ್ನ , ಶ್ರೀನಿವಾಸ್ ಉಜಿರೆ ,ಸತೀಶ್ ಕೆ ಕಾಶಿಪಟ್ನ, ಜಯವಿಕ್ರಂ, ಅಬ್ದುಲ್ ಕರೀಂ ಗೇರುಕಟ್ಟೆ ,ಸತೀಶ್ ಹೆಗ್ಡೆ ವೇಣೂರು ,ಅರವಿಂದ ಶೆಟ್ಟಿ ಖಂಡಿಗ ,ಹರೀಶ್ ಪೊಕ್ಕಿ ,ರಮೇಶ್ ಪಡ್ಡಯಿಮಜಲು, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶ್ರೀಮತಿ ವಂದನಾ ಭಂಡಾರಿ, ಜೆಸಿಂತಾ ಮೋನಿಸ್, ಹರಿಪ್ರಸಾದ್ ಹೊಸಂಗಡಿ ,ಮುಖಂಡರಾದ ಅಯೂಬ್ ಡಿ.ಕೆ ಕಲ್ಲೇರಿ, ವಿನ್ಸೆಂಟ್ ಡಿ ಸೋಜ ಮಡಂತ್ಯಾರು ,ಇಸ್ಮಾಯಿಲ್ ಕೆ ಪೆರಿಂಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್, ಮರಿತ ಪಿಂಟೋ ,ಪ್ರವೀಣ್ ಗೌಡ ,ಅಶ್ರಫ್ ಶಾಂತಿನಗರ , ಸೇರಿದಂತೆ ಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಪಾಲ್ಗೊಂಡರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya
error: Content is protected !!