23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

ಬೆಳಾಲು: ಧರ್ಮ ಮತ್ತು ನೈತಿಕ ಜಾಗೃತಿ ಮೂಲಕ ಭಾರತೀಯ ಸಂಸ್ಕೃತಿಯ ಪ್ರಸಾರ ಮತ್ತು ಬೆಳೆಸುವಲ್ಲಿ ಯಕ್ಷಗಾನ ಕಲೆಯ ಕೊಡುಗೆ ಅಪಾರ. ವಿಶ್ವದಾದ್ಯಂತ ವಿಜೃಂಭಿಸಿದ ಸಮಗ್ರ ಕಲೆ ಇದು. ಯಕ್ಷಗಾನವು ಗೋಡೆಯಾಚೆಗಿನ ಬದುಕಿನ ಅನುಭವವನ್ನು ನೀಡುವ ಕಲೆಯಾಗಿದ್ದು, ಕನ್ನಡ ಭಾಷೆಯನ್ನು ಸ್ಪಷ್ಟ ಮತ್ತು ಶುದ್ಧವಾಗಿ ಬೆಳೆಸುವಲ್ಲಿ ಇದರ ಪಾತ್ರ ಮೇಲ್ ಸ್ತರದ್ದು ಎಂದು ಉಜಿರೆ ಶ್ರೀ ಧ ಮ ಎಜ್ಯುಕೇಶನಲ್ ಸೊಸೈಟಿ(ರಿ.)ಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳಾದ ಬಿ ಸೋಮಶೇಖರ ಶೆಟ್ಟಿಯವರು ಅಭಿಪ್ರಾಯ ಪಟ್ಟರು.
ಶ್ರೀಯುತರು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಬೆಳಾಲು ಗ್ರಾಮ ಪಂಚಾಯತ್ತಿನ ಮಾಜಿ ಸದಸ್ಯರು, ಯಕ್ಷಗಾನ ಕಲಾ ಸಂಘಟಕರೂ ಆದ ದಯಾನಂದ ಮಾಯರವರು ಶುಭಕೋರಿದರು. ವೇದಿಕೆಯಲ್ಲಿ ಯಕ್ಷಗಾನ ನಾಟ್ಯ ಗುರುಗಳಾದ ಪಿ ಲಕ್ಷ್ಮಣ ಗೌಡ ಬೆಳಾಲುರವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಾದ ಲಿಖಿತಾ ಸ್ವಾಗತಿಸಿ, ಜೀವನ್ ಕುಮಾರ್ ವಂದಿಸಿದರು, ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya
error: Content is protected !!