ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಯಾದ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಬೆಳ್ತಂಗಡಿ ಬಸ್ಸು ನಿಲ್ದಾಣ ಬಳಿ ಜೂ.20 ರಂದು ಚಾಲನೆ ನೀಡಲಾಯಿತು.

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಯೋಜನೆಯ ಫಲಾನುಭವಿಗಳ ಅರ್ಜಿ ಸ್ವೀಕಾರ ಮತ್ತು ನೊಂದಾವಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಂ, ಮಾಜಿ ಜಿಲ್ಲಾ ಪಂ. ಸದಸ್ಯ ಧರಣೇಂದ್ರ ಕುಮಾರ್, ನಮಿತಾ ಪೂಜಾರಿ, ಶೇಖರ ಕುಕ್ಕೇಡಿ, ಜಯ ವಿಕ್ರಮ್, ಹಿರಿಯರಾದ ಪಿ.ಕೆ ರಾಜು ಪೂಜಾರಿ, ನಾಗೇಶ್ ಕೊಕ್ಕಡ, ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಹಕೀಂ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ ಹಾಗೂ ಎಲ್ಲಾ ಘಟಕದ ಅಧ್ಯಕ್ಷರು, ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!