July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿಸಾಧಕರು

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಕಳೆದ 4 ವರ್ಷದಿಂದ ಪೋಲೆಂಡ್ ನಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಗ್ರಾಮದ ಯುವಕ ಅಕ್ಷಯ್ ಮಾಳಿಗೆಯವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಪೋಲೆಂಡ್ ಕ್ರಾಕೌ ಯುಗಲೋನಿಯನ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಪಾರ್ಟಿಕಲ್ ಫಿಸಿಕ್ಸ್ (ಅಣು ಶಾಸ್ತ್ರ) ವಿಷಯದಲ್ಲಿ, ರೀಡ್ಔಟ್ ಏಂಡ್ ರಿಯಲ್-ಟೈಂ ಡಾಟಾ ಪ್ರೊಸೆಸಿಂಗ್ ಫಾರ್ ಹೈ-ಅಕ್ಸೆಪ್ಟೆನ್ಸ್ ಡೈ-ಎಲೆಕ್ಟ್ರಾನ್ ಸ್ಪೆಕ್ಟ್ರೋಮೀಟರ್ (ಹಾಡೇಸ್) ಅಂಡ್ ಆಂಟಿಪ್ರೋಟಾನ್ ಅನ್ಹಿಲೇಷನ್ ಅಟ್ ಡರ್ಮ್ಸ್ಟ್ಯಾಡ್ಟ್ (ಪಾಂಡಾ)ಎಂಬ ಮಹಾಪ್ರಬಂಧ ಮಂಡಿಸಿ ಅಕ್ಷಯ್ ಮಾಳಿಗೆಯವರು ಈ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಇವರು ಬಿಎಸ್ಸಿ ವಿದ್ಯಾಭ್ಯಾಸವನ್ನು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪೂರೈಸಿ, ಎಂ.ಎಸ್ಸಿ ವಿದ್ಯಾಭ್ಯಾಸವನ್ನು ಕ್ರೈಸ್ಟ್ ಕಾಲೇಜು ಬೆಂಗಳೂರಿನಲ್ಲಿ ಪೂರೈಸಿದ್ದಾರೆ. ತದನಂತರ ಉದ್ಯೋಗಕ್ಕಾಗಿ ಪೋಲೆಂಡ್ ದೇಶಕ್ಕೆ ತೆರಳಿದ್ದರು.

ಪ್ರಸ್ತುತ ಇವರು ಅಮೇರಿಕಾದ ಕೊಲಂಬಿಯಾ ಯೂನಿವರ್ಸಿಟಿಗೆ ಡಾಕ್ಟೋರಲ್ ರಿಸರ್ಚ್ ಸೈಂಟಿಸ್ಟ್ ಆಗಿ ಆಯ್ಕೆಯಾಗಿದ್ದು ಜುಲೈ 11 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಗ್ರಾಮದ ಮಾಳಿಗೆ ಮನೆಯ ಪ್ರಗತಿಪರ ಕೃಷಿಕರಾದ ಶ್ರೀಮತಿ ಉಷಾ ಮಾಳಿಗೆ ಮತ್ತು ಹರೀಶ್ ಮಾಳಿಗೆಯವರ ಸುಪುತ್ರ.

Related posts

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

Suddi Udaya
error: Content is protected !!