Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿಸಾಧಕರು

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಕಳೆದ 4 ವರ್ಷದಿಂದ ಪೋಲೆಂಡ್ ನಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಗ್ರಾಮದ ಯುವಕ ಅಕ್ಷಯ್ ಮಾಳಿಗೆಯವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಪೋಲೆಂಡ್ ಕ್ರಾಕೌ ಯುಗಲೋನಿಯನ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಪಾರ್ಟಿಕಲ್ ಫಿಸಿಕ್ಸ್ (ಅಣು ಶಾಸ್ತ್ರ) ವಿಷಯದಲ್ಲಿ, ರೀಡ್ಔಟ್ ಏಂಡ್ ರಿಯಲ್-ಟೈಂ ಡಾಟಾ ಪ್ರೊಸೆಸಿಂಗ್ ಫಾರ್ ಹೈ-ಅಕ್ಸೆಪ್ಟೆನ್ಸ್ ಡೈ-ಎಲೆಕ್ಟ್ರಾನ್ ಸ್ಪೆಕ್ಟ್ರೋಮೀಟರ್ (ಹಾಡೇಸ್) ಅಂಡ್ ಆಂಟಿಪ್ರೋಟಾನ್ ಅನ್ಹಿಲೇಷನ್ ಅಟ್ ಡರ್ಮ್ಸ್ಟ್ಯಾಡ್ಟ್ (ಪಾಂಡಾ)ಎಂಬ ಮಹಾಪ್ರಬಂಧ ಮಂಡಿಸಿ ಅಕ್ಷಯ್ ಮಾಳಿಗೆಯವರು ಈ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಇವರು ಬಿಎಸ್ಸಿ ವಿದ್ಯಾಭ್ಯಾಸವನ್ನು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪೂರೈಸಿ, ಎಂ.ಎಸ್ಸಿ ವಿದ್ಯಾಭ್ಯಾಸವನ್ನು ಕ್ರೈಸ್ಟ್ ಕಾಲೇಜು ಬೆಂಗಳೂರಿನಲ್ಲಿ ಪೂರೈಸಿದ್ದಾರೆ. ತದನಂತರ ಉದ್ಯೋಗಕ್ಕಾಗಿ ಪೋಲೆಂಡ್ ದೇಶಕ್ಕೆ ತೆರಳಿದ್ದರು.

ಪ್ರಸ್ತುತ ಇವರು ಅಮೇರಿಕಾದ ಕೊಲಂಬಿಯಾ ಯೂನಿವರ್ಸಿಟಿಗೆ ಡಾಕ್ಟೋರಲ್ ರಿಸರ್ಚ್ ಸೈಂಟಿಸ್ಟ್ ಆಗಿ ಆಯ್ಕೆಯಾಗಿದ್ದು ಜುಲೈ 11 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಗ್ರಾಮದ ಮಾಳಿಗೆ ಮನೆಯ ಪ್ರಗತಿಪರ ಕೃಷಿಕರಾದ ಶ್ರೀಮತಿ ಉಷಾ ಮಾಳಿಗೆ ಮತ್ತು ಹರೀಶ್ ಮಾಳಿಗೆಯವರ ಸುಪುತ್ರ.

Related posts

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya
error: Content is protected !!