25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿಸಾಧಕರು

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಕಳೆದ 4 ವರ್ಷದಿಂದ ಪೋಲೆಂಡ್ ನಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಗ್ರಾಮದ ಯುವಕ ಅಕ್ಷಯ್ ಮಾಳಿಗೆಯವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಪೋಲೆಂಡ್ ಕ್ರಾಕೌ ಯುಗಲೋನಿಯನ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಪಾರ್ಟಿಕಲ್ ಫಿಸಿಕ್ಸ್ (ಅಣು ಶಾಸ್ತ್ರ) ವಿಷಯದಲ್ಲಿ, ರೀಡ್ಔಟ್ ಏಂಡ್ ರಿಯಲ್-ಟೈಂ ಡಾಟಾ ಪ್ರೊಸೆಸಿಂಗ್ ಫಾರ್ ಹೈ-ಅಕ್ಸೆಪ್ಟೆನ್ಸ್ ಡೈ-ಎಲೆಕ್ಟ್ರಾನ್ ಸ್ಪೆಕ್ಟ್ರೋಮೀಟರ್ (ಹಾಡೇಸ್) ಅಂಡ್ ಆಂಟಿಪ್ರೋಟಾನ್ ಅನ್ಹಿಲೇಷನ್ ಅಟ್ ಡರ್ಮ್ಸ್ಟ್ಯಾಡ್ಟ್ (ಪಾಂಡಾ)ಎಂಬ ಮಹಾಪ್ರಬಂಧ ಮಂಡಿಸಿ ಅಕ್ಷಯ್ ಮಾಳಿಗೆಯವರು ಈ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಇವರು ಬಿಎಸ್ಸಿ ವಿದ್ಯಾಭ್ಯಾಸವನ್ನು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪೂರೈಸಿ, ಎಂ.ಎಸ್ಸಿ ವಿದ್ಯಾಭ್ಯಾಸವನ್ನು ಕ್ರೈಸ್ಟ್ ಕಾಲೇಜು ಬೆಂಗಳೂರಿನಲ್ಲಿ ಪೂರೈಸಿದ್ದಾರೆ. ತದನಂತರ ಉದ್ಯೋಗಕ್ಕಾಗಿ ಪೋಲೆಂಡ್ ದೇಶಕ್ಕೆ ತೆರಳಿದ್ದರು.

ಪ್ರಸ್ತುತ ಇವರು ಅಮೇರಿಕಾದ ಕೊಲಂಬಿಯಾ ಯೂನಿವರ್ಸಿಟಿಗೆ ಡಾಕ್ಟೋರಲ್ ರಿಸರ್ಚ್ ಸೈಂಟಿಸ್ಟ್ ಆಗಿ ಆಯ್ಕೆಯಾಗಿದ್ದು ಜುಲೈ 11 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಗ್ರಾಮದ ಮಾಳಿಗೆ ಮನೆಯ ಪ್ರಗತಿಪರ ಕೃಷಿಕರಾದ ಶ್ರೀಮತಿ ಉಷಾ ಮಾಳಿಗೆ ಮತ್ತು ಹರೀಶ್ ಮಾಳಿಗೆಯವರ ಸುಪುತ್ರ.

Related posts

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya
error: Content is protected !!