25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

ಬಂದಾರು : ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿ ಬಾಲಕಿಯೋರ್ವಳನ್ನು ರಿಕ್ಷಾದಲ್ಲಿ ಕರೆದೊಯ್ದು ಮಾನಭಂಗಕ್ಕೆ ಯತ್ನ ನಡೆಸಿದ ಆರೋಪದಲ್ಲಿ ರಿಕ್ಷಾ ಚಾಲಕ ಮತ್ತು ಇನ್ನೋರ್ವನ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿನ ನಿವಾಸಿ ಕರೀಂ ಮತ್ತು
ರಿಕ್ಷಾ ಚಾಲಕ ಸಾದಿಕ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ೧೫ ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
೧೭ ವರ್ಷದ ಬಾಲಕಿ ಜೂ. ೧೮ ರಂದು ತಾಯಿಯ ಪರವಾಗಿ ಸ್ವ ಸಹಾಯ ಸಂಘದ ಹಣ ಕಟ್ಟಲು ನಡೆದುಕೊಂಡು ಹೋಗುತ್ತಿದ್ದಾಗ ಕುಂಟಾಲಪಲ್ಕೆ ನೇರೋಳ್ದಪಲ್ಕೆ ಎಂಬಲ್ಲಿ ರಿಕ್ಷಾ ಚಾಲಕ ಸಾದಿಕ್ ಮತ್ತು ಪರಿಚಿತ ವ್ಯಕ್ತಿ ಕರೀಂ, ಬಾಲಕಿಯನ್ನು ದುರುಪಯೋಗಪಡಿಸಲು ಯತ್ನ ನಡೆಸಿದ್ದರು. ಅದಕ್ಕೂ ಮುನ್ನ ಬಾಲಕಿಗೆ ಕರೀಂ, ೨೦೦ ರೂ. ನೀಡಿ ರಿಕ್ಷಾದಲ್ಲಿ ಬೆಳ್ತಂಗಡಿಗೆ ಬರುವಂತೆ ಕರೆದಿದ್ದು, ಅದಕ್ಕೆ ಆಕೆ ನಿರಾಕರಿಸಿದ ವೇಳೆ ಕರೀಂ ಆಕೆಯ ದೇಹದ ಭಾಗಕ್ಕೆ ಕೈ ಹಾಕಿದ್ದು, ಆಕೆ ಆಟೋ ರಿಕ್ಷಾದಿಂದ ಜಿಗಿದು ಅವರಿಂದ ತಪ್ಪಿಸಿಕೊಂಡಿದ್ದಳು. ಈ ವೇಳೆ ಆಕೆಯ ಕಾಲು ಮತ್ತು ಕೈಗೆ ಗಾಯವಾಗಿದೆ. ಈ ವೇಳೆ ಆರೋಪಿಗಳು ರಿಕ್ಷಾ ನಿಲ್ಲಿಸದೆ ಪರಾರಿಯಾಗಿದ್ದರು. ಬಾಲಕಿ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ಆರೋಪಿಗಳನ್ನು ಬಂಧಿಸಲಾಗಿದೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya

ವಿಧಾನ ಸಭಾ ಚುನಾವಣೆ: ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಹೆಸರು ಘೋಷಣೆ

Suddi Udaya
error: Content is protected !!