25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

ಬಂದಾರು : ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿ ಬಾಲಕಿಯೋರ್ವಳನ್ನು ರಿಕ್ಷಾದಲ್ಲಿ ಕರೆದೊಯ್ದು ಮಾನಭಂಗಕ್ಕೆ ಯತ್ನ ನಡೆಸಿದ ಆರೋಪದಲ್ಲಿ ರಿಕ್ಷಾ ಚಾಲಕ ಮತ್ತು ಇನ್ನೋರ್ವನ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿನ ನಿವಾಸಿ ಕರೀಂ ಮತ್ತು
ರಿಕ್ಷಾ ಚಾಲಕ ಸಾದಿಕ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ೧೫ ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
೧೭ ವರ್ಷದ ಬಾಲಕಿ ಜೂ. ೧೮ ರಂದು ತಾಯಿಯ ಪರವಾಗಿ ಸ್ವ ಸಹಾಯ ಸಂಘದ ಹಣ ಕಟ್ಟಲು ನಡೆದುಕೊಂಡು ಹೋಗುತ್ತಿದ್ದಾಗ ಕುಂಟಾಲಪಲ್ಕೆ ನೇರೋಳ್ದಪಲ್ಕೆ ಎಂಬಲ್ಲಿ ರಿಕ್ಷಾ ಚಾಲಕ ಸಾದಿಕ್ ಮತ್ತು ಪರಿಚಿತ ವ್ಯಕ್ತಿ ಕರೀಂ, ಬಾಲಕಿಯನ್ನು ದುರುಪಯೋಗಪಡಿಸಲು ಯತ್ನ ನಡೆಸಿದ್ದರು. ಅದಕ್ಕೂ ಮುನ್ನ ಬಾಲಕಿಗೆ ಕರೀಂ, ೨೦೦ ರೂ. ನೀಡಿ ರಿಕ್ಷಾದಲ್ಲಿ ಬೆಳ್ತಂಗಡಿಗೆ ಬರುವಂತೆ ಕರೆದಿದ್ದು, ಅದಕ್ಕೆ ಆಕೆ ನಿರಾಕರಿಸಿದ ವೇಳೆ ಕರೀಂ ಆಕೆಯ ದೇಹದ ಭಾಗಕ್ಕೆ ಕೈ ಹಾಕಿದ್ದು, ಆಕೆ ಆಟೋ ರಿಕ್ಷಾದಿಂದ ಜಿಗಿದು ಅವರಿಂದ ತಪ್ಪಿಸಿಕೊಂಡಿದ್ದಳು. ಈ ವೇಳೆ ಆಕೆಯ ಕಾಲು ಮತ್ತು ಕೈಗೆ ಗಾಯವಾಗಿದೆ. ಈ ವೇಳೆ ಆರೋಪಿಗಳು ರಿಕ್ಷಾ ನಿಲ್ಲಿಸದೆ ಪರಾರಿಯಾಗಿದ್ದರು. ಬಾಲಕಿ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ಆರೋಪಿಗಳನ್ನು ಬಂಧಿಸಲಾಗಿದೆ.

Related posts

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya
error: Content is protected !!