23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : “ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಹಾಗೆಯೇ ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಅರೋಗ್ಯ ವೃದ್ಧಿಸಬಹುದು” ಎಂದು ಎಸ್. ಡಿ. ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ಡಾ. ವಡ್ಡೆ ವೆಂಕಟ ಕಾರ್ತಿಕ್ ಹೇಳಿದರು.

ಇವರು ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜೂ 21 ರಂದು ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ತಿಳಿಸುವುದರ ಜೊತೆಗೆ ಯೋಗ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದ ಪ್ರಕಾಶ್ ಕಾರ್ಯಕ್ರಮ ನಿರೂಪಣೆ ಮತ್ತು ವಂದಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪದವಿ ಪ್ರಧಾನ ಸಮಾರಂಭ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya
error: Content is protected !!