25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

ಉಜಿರೆ: ಪತಂಜಲಿ ಪ್ರಣೀತ ಯೋಗವು ಈಗ ವಿಶ್ವ ಯೋಗ ದಿನದ ಮೂಲಕ ವಿಶ್ವವ್ಯಾಪಿಯಾಗಿ ಜನಮನ್ನಣೆ ಗಳಿಸಿರುವುದು ಭಾರತೀಯರಾದ ನಮಗೆ ಹೆಮ್ಮೆಯ ವಿಷಯ. ಯಾವುದೇ ವರ್ಗ , ಧರ್ಮ ಹಾಗೂ ಜಾತಿಗಳಿಗೆ ಅತೀತವಾಗಿ ಇರುವುದೇ ಈ ಯೋಗ ವಿದ್ಯೆ. ಒಟ್ಟಾರೆ ದೈಹಿಕ ಹಾಗೂ ಮಾನಸಿಕ ಶ್ರೇಯೋಭಿವೃದ್ಧಿಗೆ ಯೋಗ ಅತಿಮುಖ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಯೋಗ ಹಾಗೂ ಸಂಗೀತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮನ್ನು ಶಾಂತತೆಗೆ ಕೊಂಡೊಯ್ಯಲು ಸಂಗೀತ ಮುಖ್ಯ. ಭಾರತೀಯ ಸಂಗೀತ ಸರ್ವಶ್ರೇಷ್ಠವಾಗಿದೆ. ಸಂಗೀತದಿಂದ ಆತ್ಮತೃಪ್ತಿ ಹೊಂದಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಸ್ವಯಂ ಸೇವಕರಿಂದ ಯೋಗ ನಡೆಯಿತು. ಪ್ರಸೀದಾ ರಾವ್, ಸಿಂಧೂರ ಶೆಂಡೈ ಹಾಗೂ ಶ್ರೀಲತಾ ಅವರು ಕರ್ನಾಟಕ ಸಂಗೀತ ಕಛೇರಿ ನಡೆಸಿದರು.
ಅಕ್ಷತಾ ಎಂ.ಜಿ ಸ್ವಾಗತಿಸಿ, ಸುದರ್ಶನ ನಾಯಕ್ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

Related posts

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya
error: Content is protected !!