25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

ಉಜಿರೆ: ಪತಂಜಲಿ ಪ್ರಣೀತ ಯೋಗವು ಈಗ ವಿಶ್ವ ಯೋಗ ದಿನದ ಮೂಲಕ ವಿಶ್ವವ್ಯಾಪಿಯಾಗಿ ಜನಮನ್ನಣೆ ಗಳಿಸಿರುವುದು ಭಾರತೀಯರಾದ ನಮಗೆ ಹೆಮ್ಮೆಯ ವಿಷಯ. ಯಾವುದೇ ವರ್ಗ , ಧರ್ಮ ಹಾಗೂ ಜಾತಿಗಳಿಗೆ ಅತೀತವಾಗಿ ಇರುವುದೇ ಈ ಯೋಗ ವಿದ್ಯೆ. ಒಟ್ಟಾರೆ ದೈಹಿಕ ಹಾಗೂ ಮಾನಸಿಕ ಶ್ರೇಯೋಭಿವೃದ್ಧಿಗೆ ಯೋಗ ಅತಿಮುಖ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಯೋಗ ಹಾಗೂ ಸಂಗೀತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮನ್ನು ಶಾಂತತೆಗೆ ಕೊಂಡೊಯ್ಯಲು ಸಂಗೀತ ಮುಖ್ಯ. ಭಾರತೀಯ ಸಂಗೀತ ಸರ್ವಶ್ರೇಷ್ಠವಾಗಿದೆ. ಸಂಗೀತದಿಂದ ಆತ್ಮತೃಪ್ತಿ ಹೊಂದಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಸ್ವಯಂ ಸೇವಕರಿಂದ ಯೋಗ ನಡೆಯಿತು. ಪ್ರಸೀದಾ ರಾವ್, ಸಿಂಧೂರ ಶೆಂಡೈ ಹಾಗೂ ಶ್ರೀಲತಾ ಅವರು ಕರ್ನಾಟಕ ಸಂಗೀತ ಕಛೇರಿ ನಡೆಸಿದರು.
ಅಕ್ಷತಾ ಎಂ.ಜಿ ಸ್ವಾಗತಿಸಿ, ಸುದರ್ಶನ ನಾಯಕ್ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya
error: Content is protected !!