25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

ಉಜಿರೆ: ಪತಂಜಲಿ ಪ್ರಣೀತ ಯೋಗವು ಈಗ ವಿಶ್ವ ಯೋಗ ದಿನದ ಮೂಲಕ ವಿಶ್ವವ್ಯಾಪಿಯಾಗಿ ಜನಮನ್ನಣೆ ಗಳಿಸಿರುವುದು ಭಾರತೀಯರಾದ ನಮಗೆ ಹೆಮ್ಮೆಯ ವಿಷಯ. ಯಾವುದೇ ವರ್ಗ , ಧರ್ಮ ಹಾಗೂ ಜಾತಿಗಳಿಗೆ ಅತೀತವಾಗಿ ಇರುವುದೇ ಈ ಯೋಗ ವಿದ್ಯೆ. ಒಟ್ಟಾರೆ ದೈಹಿಕ ಹಾಗೂ ಮಾನಸಿಕ ಶ್ರೇಯೋಭಿವೃದ್ಧಿಗೆ ಯೋಗ ಅತಿಮುಖ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಯೋಗ ಹಾಗೂ ಸಂಗೀತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮನ್ನು ಶಾಂತತೆಗೆ ಕೊಂಡೊಯ್ಯಲು ಸಂಗೀತ ಮುಖ್ಯ. ಭಾರತೀಯ ಸಂಗೀತ ಸರ್ವಶ್ರೇಷ್ಠವಾಗಿದೆ. ಸಂಗೀತದಿಂದ ಆತ್ಮತೃಪ್ತಿ ಹೊಂದಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಸ್ವಯಂ ಸೇವಕರಿಂದ ಯೋಗ ನಡೆಯಿತು. ಪ್ರಸೀದಾ ರಾವ್, ಸಿಂಧೂರ ಶೆಂಡೈ ಹಾಗೂ ಶ್ರೀಲತಾ ಅವರು ಕರ್ನಾಟಕ ಸಂಗೀತ ಕಛೇರಿ ನಡೆಸಿದರು.
ಅಕ್ಷತಾ ಎಂ.ಜಿ ಸ್ವಾಗತಿಸಿ, ಸುದರ್ಶನ ನಾಯಕ್ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!