July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

ಉಜಿರೆ: ಪತಂಜಲಿ ಪ್ರಣೀತ ಯೋಗವು ಈಗ ವಿಶ್ವ ಯೋಗ ದಿನದ ಮೂಲಕ ವಿಶ್ವವ್ಯಾಪಿಯಾಗಿ ಜನಮನ್ನಣೆ ಗಳಿಸಿರುವುದು ಭಾರತೀಯರಾದ ನಮಗೆ ಹೆಮ್ಮೆಯ ವಿಷಯ. ಯಾವುದೇ ವರ್ಗ , ಧರ್ಮ ಹಾಗೂ ಜಾತಿಗಳಿಗೆ ಅತೀತವಾಗಿ ಇರುವುದೇ ಈ ಯೋಗ ವಿದ್ಯೆ. ಒಟ್ಟಾರೆ ದೈಹಿಕ ಹಾಗೂ ಮಾನಸಿಕ ಶ್ರೇಯೋಭಿವೃದ್ಧಿಗೆ ಯೋಗ ಅತಿಮುಖ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಯೋಗ ಹಾಗೂ ಸಂಗೀತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮನ್ನು ಶಾಂತತೆಗೆ ಕೊಂಡೊಯ್ಯಲು ಸಂಗೀತ ಮುಖ್ಯ. ಭಾರತೀಯ ಸಂಗೀತ ಸರ್ವಶ್ರೇಷ್ಠವಾಗಿದೆ. ಸಂಗೀತದಿಂದ ಆತ್ಮತೃಪ್ತಿ ಹೊಂದಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಸ್ವಯಂ ಸೇವಕರಿಂದ ಯೋಗ ನಡೆಯಿತು. ಪ್ರಸೀದಾ ರಾವ್, ಸಿಂಧೂರ ಶೆಂಡೈ ಹಾಗೂ ಶ್ರೀಲತಾ ಅವರು ಕರ್ನಾಟಕ ಸಂಗೀತ ಕಛೇರಿ ನಡೆಸಿದರು.
ಅಕ್ಷತಾ ಎಂ.ಜಿ ಸ್ವಾಗತಿಸಿ, ಸುದರ್ಶನ ನಾಯಕ್ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!