22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ರೋವರ್ ರೇಂಜರ್ಸ್, ಯುವರ್ ರೆಡ್ ಕ್ರಾಸ್ ಘಟಕ, ಎನ್‌ಸಿಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಸುಬ್ರಹ್ಮಣ್ಯ ಕೆ. ಯೋಗ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದರು ಹಾಗೂ ಯೋಗ ಮಾಡುವುದರಿಂದ ಆಗುವ ದೈಹಿಕ ಮತ್ತು ಮಾನಸಿಕ ಅನುಕೂಲತೆಗಳ ಬಗ್ಗೆ ತಿಳಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಎನ್ ಸಿ ಸಿ ನೇವಿ ಘಟಕದ ಲೆಫ್ಟಿನೆಂಟ್ ಡಾ| ಶೈಲೇಶ್ ಕುಮಾರ್ ಡಿಹೆಚ್ ಹಾಗೂ ಅಂತಿಮ ಸ್ನಾತಕೋತ್ತರ ವಿಭಾಗದ ಕುಮಾರಿ ಲತಾ ಇವರು ಯೋಗಾಸನದ ಪ್ರಾತ್ಯಕ್ಷಿತೆ ಮಾಡಿ ವಿದ್ಯಾರ್ಥಿಗಳಿಗೆ ಯೋಗಾಸನವನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ಭಾಗದ ಎಲ್ಲ ವಿದ್ಯಾರ್ಥಿಗಳು ಹಾಗೂ ಎಲ್ಲಾ ಪ್ರಾಧ್ಯಾಪಕ ವೃಂದದವರು ಸಕ್ರಿಯವಾಗಿ ಭಾಗವಹಿಸಿದರು.

ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ರವಿ ಎಮ್ ಎನ್ ಸ್ವಾಗತಿಸಿದರು. ರೇಂಜಸ್ ಲೀಡರ್ ಪ್ರೊ| ರಾಜೇಶ್ವರಿ ವಂದಿಸಿದರು.

Related posts

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya
error: Content is protected !!