25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ 2023-24ನೇ ಸಾಲಿನ ಯಕ್ಷಗಾನ ತರಬೇತಿ ಉದ್ಘಾಟನೆ ನೆರವೇರಿತು. ವಿದ್ಯಾರ್ಥಿನಿಯರ ಯಕ್ಷಗಾನ ನೃತ್ಯ ದ ಪ್ರದರ್ಶನದ ಮೂಲಕ ಕಾರ್ಯಕ್ರಮಕ್ಕೆ ಸ್ವಾಗತವನ್ನು ಮಾಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಪ್ರಜ್ವಲನೆಯ ಮೂಲಕ ನೆರವೇರಿಸಿದ ಧರ್ಮಸ್ಥಳ ಕೃಪಾಪೋಷಿತ ಯಕ್ಷಗಾನ ಮಂಡಳಿಯ ವ್ಯವಸ್ಥಾಪಕ ಗಿರೀಶ್ ಹೆಗ್ಡೆ ಮಾತನಾಡಿ ಯಕ್ಷಗಾನ ಒಂದು ಪರಿಪೂರ್ಣ ಕಲೆ. ಇದು ಒಂದು ಆಶು ಸಾಹಿತ್ಯ, ಅಶುಪ್ರದರ್ಶನವಾಗಿದೆ. ಯಕ್ಷಗಾನ ಕಲಾವಿದರು ಎಲ್ಲಾ ಪತ್ರಗಳನ್ನು ನಿರ್ವಹಿಸಲು ತಯಾರಿಯಾಗಿರುತ್ತಾರೆ. ವಿದ್ಯಾರ್ಥಿ ಜೀವನದಲ್ಲಿ ಯಕ್ಷಗಾನವನ್ನು ಕಲಿತರೆ ಮುಂದಿನ ಪೀಳಿಗೆಗೆ ಮುಂದುವರೆಸಿಕೊಂಡು ಹೋಗಬಹುದು ಎಂದು ಹೇಳಿದರು.

ಯಕ್ಷಗಾನ ತರಬೇತುದಾರ ಲಕ್ಷ್ಮಣ ಬೆಳಾಲು ಇವರು ಯಕ್ಷಗಾನ ಕಲೆ ನಿತ್ಯ ವಿನೂತನ. ಕಲಾವಿದನಾದವನು ತನ್ನ ಯಾವ ನೋವುಗಳಿದ್ದರೂ ಪ್ರೇಕ್ಷಕರನ್ನು ಅದ್ಭುತ ಲೋಕಕ್ಕೆ ಕರೆದುಕೊಂಡು ಹೋಗುವ ಕಲಾವಿದನಾಗಿರುತ್ತಾನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯ ಗುರುಗಳಾದ . ಪಿ. ಸುಬ್ರಮಣ್ಯ ರಾವ್ ಮಾತನಾಡಿ ಯಕ್ಷಗಾನ ಕಲಿಯುವುದರಿಂದ ಭಾಷಾ ಸ್ಪಷ್ಟತೆ ಹೆಚ್ಚುತ್ತದೆ. ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಯುತ್ತದೆ ಇದರಿಂದ ಮಕ್ಕಳು ಎಳವೆಯಲ್ಲಿಯೇ ಯಕ್ಷಗಾನ ಕಲಿಯಬೇಕು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕುಮಾರಿ ಚಿನ್ಮಯಿ ನಿರೂಪಿಸಿದ ಕಾರ್ಯಕ್ರಮವನ್ನು ಕುಮಾರಿ ಕು| ಸುಮಿತ ವಂದಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya
error: Content is protected !!