25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಕಳಿಯ: ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ಸಂಘದ ಕಾರ್ಯವ್ಯಾಪ್ತಿಯ ಎನ್.ಸಿ.ಎಸ್ ನೋಂದಾಯಿಸಿರುವ ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮವು ಜೂ.21 ರಂದು ಕಳಿಯ ಸರಕಾರಿ ಸಭಾಭವನ ಗೇರುಕಟ್ಟೆಯಲ್ಲಿ ನಡೆಯಿತು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಗೋದಾಮು ಕಟ್ಟಡ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ವಸಂತ ಮಜಲು ಮತ್ತು ಡಾ. ಎಂ.ಎನ್. ರಾಜೇಂದ್ರ ಕುಮಾರ್ ದೀಪ ಪ್ರಜ್ವಲನೆ ಮಾಡಿದರು.

ಗೌರವ ಉಪಸ್ಥಿತಿಯಲ್ಲಿ ಪುತ್ತೂರು ಸಹಕಾರಿ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ, ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಗೌಡ, ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಉಜಿರೆ ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಂದರ ಗೌಡ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನಾಣ್ಯಪ್ಪ ಪೂಜಾರಿ ಕಲ್ಲಾಪು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತ್ಯಶಂಕರ ಕೆ.ಜಿ., ನಿರ್ದೇಶಕರುಗಳಾದ ರಾಜ್ ಪ್ರಕಾಶ್ ಶೆಟ್ಟಿ, ದೇವಣ್ಣ ಮೂಲ್ಯ, ಎಂ. ಹರಿದಾಸ ಪಡಂತ್ತಾಯ, ರಾಜೀವ ಗೌಡ, ನೋಣಯ್ಯ, ರತ್ನಾಕರ, ಶಶಿಧರ ಶೆಟ್ಟಿ, ಶೇಖರ ನಾಯ್ಕ, ಚಂದ್ರಾವತಿ, ಮಮತಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!