September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂಬತ್ತನೇ ವರ್ಷದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದರು. ಎಸ್‌ಡಿಎಂ ಯೋಗ ವಿಜ್ಞಾನ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಸಹಾಯಕ ಪ್ರೊ| ಶ್ರೀಮತಿ ವರ್ಷಿಣಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಯೋಗಗೀತೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮತ್ತು ಸೂರ್ಯ ನಮಸ್ಕಾರ ಕುರಿತ ಬಿತ್ತಿ ಪತ್ರ ಬಿಡುಗಡೆಗೊಳಿಸುವುದರ ಮೂಲಕ ಉದ್ಘಾಟಿಸಲಾಯಿತು.

ವರ್ಷಿಣಿ ಅವರು ತಮ್ಮ ಉದ್ಘಾಟನ ನುಡಿಗಳಲ್ಲಿ ‘ ಯೋಗವು ದೇಹ ಮತ್ತು ಮನಸ್ಸನ್ನು ಸಂಪರ್ಕಿಸುವ ಸಾಧನ. ಯೋಗವು ಪರಸ್ಪರರನ್ನು ಬೆಸೆಯುವಲ್ಲಿ ಸಹಕರಿಸುತ್ತದೆ, ಅದು ಪರಸ್ಪರರಲ್ಲಿನ ಗೊಂದಲಗಳನ್ನು ದೂರ ಮಾಡಿ ವಸುದೈವ ಕುಟುಂಬಕಂ ತತ್ವವನ್ನು ಅನುಷ್ಠಾನಗೊಳ್ಳುವಂತೆ ಮಾಡುತ್ತದೆ’ ಎಂದು ಹೇಳಿದರು.

ಮನಸ್ಸಿನ ಕಲ್ಮಶಗಳನ್ನು ದೂರಗೊಳಿಸಿ ನಡತೆಯನ್ನು ಉತ್ತಮಗೊಳಿಸುವಲ್ಲಿ ಯೋಗವು ತುಂಬಾ ಸಹಕಾರಿ ಎಂದು ಯೋಗದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.

ಹತ್ತು ದಿನಗಳವರೆಗೆ ಯೋಗ ತರಬೇತಿ ನೀಡಿದ ಎಸ್‌ಡಿಎಂ ಯೋಗ ವಿಜ್ಞಾನ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಅಶ್ವಿತಾ ಮತ್ತು ಕುಮಾರಿ ಪ್ರಾರ್ಥನಾ ಅವರಿಗೆ ಶಾಲಾ ಮುಖ್ಯ ಶಿಕ್ಷಕರು ಸ್ಮರಣಿಕೆ ನೀಡಿ ಗೌರವಿಸಿದರು. ಸಹ ಶಿಕ್ಷಕಿ ಕಾವ್ಯ ಸ್ವಾಗತಿಸಿದರು, ಸಹ ಶಿಕ್ಷಕಿ ಶ್ರೀಮತಿ ಜ್ಯೋತಿ ಧನ್ಯವಾದ ಸಮರ್ಪಿಸಿದರು, ಸಹಶಿಕ್ಷಕಿ ಶ್ರೀಮತಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಅವರ ಮುಂದಾಳುತ್ವದಲ್ಲಿ ಜರುಗಿದ ಈ ಕಾರ್ಯಕ್ರಮಕ್ಕೆ ಎಲ್ಲಾ ಶಿಕ್ಷಕರು ಸಹಕರಿಸಿದರು. ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಜರುಗಿತು.

Related posts

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya
error: Content is protected !!