25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

ಉಜಿರೆ: ಪತಂಜಲಿ ಪ್ರಣೀತ ಯೋಗವು ಈಗ ವಿಶ್ವ ಯೋಗ ದಿನದ ಮೂಲಕ ವಿಶ್ವವ್ಯಾಪಿಯಾಗಿ ಜನಮನ್ನಣೆ ಗಳಿಸಿರುವುದು ಭಾರತೀಯರಾದ ನಮಗೆ ಹೆಮ್ಮೆಯ ವಿಷಯ. ಯಾವುದೇ ವರ್ಗ , ಧರ್ಮ ಹಾಗೂ ಜಾತಿಗಳಿಗೆ ಅತೀತವಾಗಿ ಇರುವುದೇ ಈ ಯೋಗ ವಿದ್ಯೆ. ಒಟ್ಟಾರೆ ದೈಹಿಕ ಹಾಗೂ ಮಾನಸಿಕ ಶ್ರೇಯೋಭಿವೃದ್ಧಿಗೆ ಯೋಗ ಅತಿಮುಖ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಯೋಗ ಹಾಗೂ ಸಂಗೀತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮನ್ನು ಶಾಂತತೆಗೆ ಕೊಂಡೊಯ್ಯಲು ಸಂಗೀತ ಮುಖ್ಯ. ಭಾರತೀಯ ಸಂಗೀತ ಸರ್ವಶ್ರೇಷ್ಠವಾಗಿದೆ. ಸಂಗೀತದಿಂದ ಆತ್ಮತೃಪ್ತಿ ಹೊಂದಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಸ್ವಯಂ ಸೇವಕರಿಂದ ಯೋಗ ನಡೆಯಿತು. ಪ್ರಸೀದಾ ರಾವ್, ಸಿಂಧೂರ ಶೆಂಡೈ ಹಾಗೂ ಶ್ರೀಲತಾ ಅವರು ಕರ್ನಾಟಕ ಸಂಗೀತ ಕಛೇರಿ ನಡೆಸಿದರು.
ಅಕ್ಷತಾ ಎಂ.ಜಿ ಸ್ವಾಗತಿಸಿ, ಸುದರ್ಶನ ನಾಯಕ್ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

Related posts

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!