25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

ಉಜಿರೆ: ಪತಂಜಲಿ ಪ್ರಣೀತ ಯೋಗವು ಈಗ ವಿಶ್ವ ಯೋಗ ದಿನದ ಮೂಲಕ ವಿಶ್ವವ್ಯಾಪಿಯಾಗಿ ಜನಮನ್ನಣೆ ಗಳಿಸಿರುವುದು ಭಾರತೀಯರಾದ ನಮಗೆ ಹೆಮ್ಮೆಯ ವಿಷಯ. ಯಾವುದೇ ವರ್ಗ , ಧರ್ಮ ಹಾಗೂ ಜಾತಿಗಳಿಗೆ ಅತೀತವಾಗಿ ಇರುವುದೇ ಈ ಯೋಗ ವಿದ್ಯೆ. ಒಟ್ಟಾರೆ ದೈಹಿಕ ಹಾಗೂ ಮಾನಸಿಕ ಶ್ರೇಯೋಭಿವೃದ್ಧಿಗೆ ಯೋಗ ಅತಿಮುಖ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಯೋಗ ಹಾಗೂ ಸಂಗೀತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮನ್ನು ಶಾಂತತೆಗೆ ಕೊಂಡೊಯ್ಯಲು ಸಂಗೀತ ಮುಖ್ಯ. ಭಾರತೀಯ ಸಂಗೀತ ಸರ್ವಶ್ರೇಷ್ಠವಾಗಿದೆ. ಸಂಗೀತದಿಂದ ಆತ್ಮತೃಪ್ತಿ ಹೊಂದಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಸ್ವಯಂ ಸೇವಕರಿಂದ ಯೋಗ ನಡೆಯಿತು. ಪ್ರಸೀದಾ ರಾವ್, ಸಿಂಧೂರ ಶೆಂಡೈ ಹಾಗೂ ಶ್ರೀಲತಾ ಅವರು ಕರ್ನಾಟಕ ಸಂಗೀತ ಕಛೇರಿ ನಡೆಸಿದರು.
ಅಕ್ಷತಾ ಎಂ.ಜಿ ಸ್ವಾಗತಿಸಿ, ಸುದರ್ಶನ ನಾಯಕ್ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya
error: Content is protected !!