July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

ಬೆಳ್ತಂಗಡಿ: ವಿದ್ಯಾಪ್ರೇಮಿ ಸಯ್ಯಿದ್ ಉಮ್ಮರ್ ಅಸ್ಸಖಾಫ್ ಮನ್‌ಶರ್ ತಂಙಳ್ ಅವರ ನೇತೃತ್ವದಲ್ಲಿ ಗೇರುಕಟ್ಟೆಯಲ್ಲಿ ಕಳೆದ 13 ವರ್ಷಗಳಿಂದ ಆರಂಭಗೊಂಡು ಮುಂದುವರಿಯುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಹೊಸ ಸೇರ್ಪಡೆ ಎಂಬಂತೆ ಪ.ಪೂ ವಿಜ್ಞಾನ (ಸೈನ್ಸ್) ವಿಭಾಗ ಆರಂಭಿಸಲು ಸರಕಾರ ಅಧಿಕೃತ ಅನುಮೋದನೆ ನೀಡಿದೆ.

ಈಗಾಗಲೇ ಮನ್‌ಶರ್ ಅಕಾಡೆಮಿಗೆ 2022-23ರ ಶೈಕ್ಷಣಿಕ ಸಾಲಿನಲ್ಲಿ ಪ.ಪೂ ವಿಭಾಗ ತೆರೆದು ವಾಣಿಜ್ಯ ಮತ್ತು ಕಲಾ ವಿಭಾಗ ಪ್ರಾರಂಭಿಸಲು ಅನುಮೋದನೆ ದೊರತಿತ್ತು. ಇದೀಗ ಹೆಚ್ಚುವರಿಯಾಗಿ 2023-24 ರ ಶೈಕ್ಷಣಿಕ ಸಾಲಿಗೆ ವಿಜ್ಞಾನ (ಸೈನ್ಸ್) ವಿಭಾಗಕ್ಕೂ ಅನುಮೋದನೆ ಲಭಿಸದೆ. ಆ ನಿಟ್ಟಿನಲ್ಲಿ ದಾಖಲಾತಿ ಆರಂಭವಾಗಿದೆ. ಸಂಸ್ಥೆಯಲ್ಲಿ ಈಗಾಗಲೇ ಸುಸಜ್ಜಿತ ಲ್ಯಾಬ್‌ನೊಂದಿಗೆ ಆಧುನಿಕ ಶೈಲಿಯ ಸ್ಮಾರ್ಟ್ ಕ್ಲಾಸ್ ಒಳಗೊಂಡು ಅನುಭವಿ ಹಾಗೂ ನುರಿತ ಅಧ್ಯಾಪಕ ವೃಂದ ತರಗತಿ ನಡೆಸುತ್ತಿದ್ದಾರೆ. ನೀಟ್ ಮತ್ತು ಸಿಇಟಿ ಯಂತಹಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ತಯಾರಿಸುವ ಗುರಿ ಕೂಡ ಹೊಂದಲಾಗಿದೆ.ಗ್ರಾಮೀಣ‌ ಭಾಗದ ಆಸಕ್ತ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು‌ ಎಂದು ಚೇರ್‌ಮ್ಯಾನ್ ಮತ್ತು ಮ್ಯಾನೇಜ್‌ಮೆಂಟ್ ಕೋರಿದೆ. ಪ್ರಸ್ತುತ ಮನ್‌ಶರ್ ಪ್ರಿಸ್ಕೂಲ್, ಪ್ರೈಮರಿ ಸ್ಜೂಲ್, ಹೈಸ್ಕೂಲ್ , ಪಿ.ಯು. ಕಾಲೇಜು, ಬೆಳ್ತಂಗಡಿ ತಾಲೂಕಿನ ಏಕೈಕ ಪ್ಯಾರಾಮೆಡಿಕಲ್ ಕಾಲೇಜು , ಮನ್‌ಶರ್ ಅರೇಬಿಕ್ ಕಾಲೇಜು ಹಾಗು ಸ್ಕೂಲ್ ಆಫ್ ಹಿಫುಲುಲ್ ಖುರ್‌ಆನ್‌ ವಿಭಾಗಗಳನ್ನು ನಡೆಸಲಾಗುತ್ತಿದ್ದು, ಸರಿ ಸುಮಾರು 700 ರಿಂದ 750 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ.

Related posts

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!