23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9 ನೇ  ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು 6 ದಿನಗಳ ಯೋಗ ತರಬೇತಿ ಶಿಬಿರ ಜೂ. 21ರಂದು ಸಂಪನ್ನಗೊಂಡಿತು.

ಕಾರ್ಯಕ್ರಮದ ಮುಖ್ಯ ಅತಿಥಿ, ಧರ್ಮಸ್ಥಳ ಶಾಂತಿವನದ ನಿವಾಸಿ ವೈದ್ಯಾಧಿಕಾರಿ ಡಾ. ಶಶಿಕಿರಣ್ ಎಚ್ ಸಿ ಮಾತನಾಡಿ, ವಿದ್ಯಾರ್ಥಿಗಳು ಬೆಳಗ್ಗೆ ಬೇಗನೇ ಏಳುವ ಅಭ್ಯಾಸ, ಯೋಗ ಮತ್ತು ಧ್ಯಾನಗಳನ್ನು ಮೈಗೂಡಿಸಿಕೊಂಡು ಮತ್ತು ಬೇಕರಿ ಆಹಾರವನ್ನು ತ್ಯಜಿಸಿ, ಆರೋಗ್ಯಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಎಸ್ ಡಿ ಎಂ ಪ್ರಕೃತಿ ಮತ್ತು ಯೋಗ ವಿಜ್ಞಾನಿಗಳ ಮಹಾವಿದ್ಯಾಲಯದ ಎಂ.ಡಿ  ವಿದ್ಯಾರ್ಥಿ ಡಾ. ಗುರುಪ್ರವೀಣ್ ಎಸ್ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.  
ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಮತ್ತು ದೈಹಿಕ ಶಿಕ್ಷಕರಾದ ಪ್ರವೀಣ್ ಕುಮಾರ್ ಇವರ ಮಾರ್ಗದರ್ಶನದಲ್ಲಿ, ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಸಂಯೋಜಿಸಲಾಯಿತು. ಶಿಕ್ಷಕ ಶ್ರೇಯಾಂಸ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya
error: Content is protected !!