25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.

ಗ್ರಾಮದ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವ ಬಗ್ಗೆ ಗ್ರಾಮಸ್ಥರು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ ಹೆಗ್ಡೆ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಡಿ., ಕಾರ್ಯದರ್ಶಿ ಯೋಗಿಣಿ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಇಲಾಖಾ ಅಧಿಕಾರಿ, ಸಿಬಂದಿ ವರ್ಗ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸಿಬ್ಬಂದಿ ಸತೀಶ್ ಕೆ ಕುತ್ಲೂರು ಕಳೆದ ಗ್ರಾಮ ಸಭೆಯ ಕಾರ್ಯಪಾಲನಾ ವರದಿ ಸಭೆಗೆ ಮಂಡಿಸಿದರು. ವಿವಿಧ ಇಲಾಖಾ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Related posts

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!