23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 19 ರಂದು ಮಂಗಳೂರಿನಲ್ಲಿ ನಡೆದಿದೆ.

ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಮೃತಪಟ್ಟವರಾಗಿದ್ದಾರೆ.

ದಾಸ್ ರವರ ಮಗ ನರೇಂದ್ರ ಮತ್ತು ಅಣ್ಣನ ಮಗ ರೋಹಿತ್ ಅವರು ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯ ನಲ್ಲಿದ್ದು ಅದಿರಾ ನೀರುಮಾರ್ಗದ ಮಂಗಳಾ ಕಾಲೇಜಿನಲ್ಲಿ ಮೊದಲನೇ ವರ್ಷದ ಪ್ಯಾರಮೆಡಿಕಲ್ ವ್ಯಾಸಂಗ ಮಾಡುತಿದ್ದರು. ಜೂ 18 ರಂದು ಆದಿತ್ಯವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಅದಿರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ.

ಅದರೆ ಜೂನ್ 19 ಸೋಮವಾರ ಬೆಳಗ್ಗೆ 8 ಗಂಟೆಗೆ ಎದ್ದು ನರೇಂದ್ರ ನೋಡುವಾಗ ಅದಿರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ. ಅವರು ಬಂದು ಸ್ಥಳೀಯರ ಸಹಕಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮಗಳನ್ನು ಕೊಂಡು ಹೋಗಿದ್ದಾರೆ ಅದರೆ ಅಷ್ಟೋತ್ತಿಗಾಗಲೇ ಪರೀಕ್ಷಿಸಿದ ವೈದ್ಯರು ಯುವತಿ ಮೃತ ಪಟ್ಟಿರುವುದಾಗಿ ಧೃಡಪಡಿಸಿದ್ದಾರೆ. ಈ ಬಗ್ಗೆ ಯುವತಿಯ ತಂದೆ ದಾಸ್ ಅವರು ಯಾವುದೋ ಕಾರಣಕ್ಕಾಗಿ ಮಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಯುವತಿಯ ಮೊಬೈಲ್ ವಿವರಗಳನ್ನು ಪರಿಶೀಲನೆ ನಡೆಸುತಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!