22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 19 ರಂದು ಮಂಗಳೂರಿನಲ್ಲಿ ನಡೆದಿದೆ.

ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಮೃತಪಟ್ಟವರಾಗಿದ್ದಾರೆ.

ದಾಸ್ ರವರ ಮಗ ನರೇಂದ್ರ ಮತ್ತು ಅಣ್ಣನ ಮಗ ರೋಹಿತ್ ಅವರು ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯ ನಲ್ಲಿದ್ದು ಅದಿರಾ ನೀರುಮಾರ್ಗದ ಮಂಗಳಾ ಕಾಲೇಜಿನಲ್ಲಿ ಮೊದಲನೇ ವರ್ಷದ ಪ್ಯಾರಮೆಡಿಕಲ್ ವ್ಯಾಸಂಗ ಮಾಡುತಿದ್ದರು. ಜೂ 18 ರಂದು ಆದಿತ್ಯವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಅದಿರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ.

ಅದರೆ ಜೂನ್ 19 ಸೋಮವಾರ ಬೆಳಗ್ಗೆ 8 ಗಂಟೆಗೆ ಎದ್ದು ನರೇಂದ್ರ ನೋಡುವಾಗ ಅದಿರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ. ಅವರು ಬಂದು ಸ್ಥಳೀಯರ ಸಹಕಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮಗಳನ್ನು ಕೊಂಡು ಹೋಗಿದ್ದಾರೆ ಅದರೆ ಅಷ್ಟೋತ್ತಿಗಾಗಲೇ ಪರೀಕ್ಷಿಸಿದ ವೈದ್ಯರು ಯುವತಿ ಮೃತ ಪಟ್ಟಿರುವುದಾಗಿ ಧೃಡಪಡಿಸಿದ್ದಾರೆ. ಈ ಬಗ್ಗೆ ಯುವತಿಯ ತಂದೆ ದಾಸ್ ಅವರು ಯಾವುದೋ ಕಾರಣಕ್ಕಾಗಿ ಮಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಯುವತಿಯ ಮೊಬೈಲ್ ವಿವರಗಳನ್ನು ಪರಿಶೀಲನೆ ನಡೆಸುತಿದ್ದಾರೆ.

Related posts

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!