25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 19 ರಂದು ಮಂಗಳೂರಿನಲ್ಲಿ ನಡೆದಿದೆ.

ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಮೃತಪಟ್ಟವರಾಗಿದ್ದಾರೆ.

ದಾಸ್ ರವರ ಮಗ ನರೇಂದ್ರ ಮತ್ತು ಅಣ್ಣನ ಮಗ ರೋಹಿತ್ ಅವರು ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯ ನಲ್ಲಿದ್ದು ಅದಿರಾ ನೀರುಮಾರ್ಗದ ಮಂಗಳಾ ಕಾಲೇಜಿನಲ್ಲಿ ಮೊದಲನೇ ವರ್ಷದ ಪ್ಯಾರಮೆಡಿಕಲ್ ವ್ಯಾಸಂಗ ಮಾಡುತಿದ್ದರು. ಜೂ 18 ರಂದು ಆದಿತ್ಯವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಅದಿರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ.

ಅದರೆ ಜೂನ್ 19 ಸೋಮವಾರ ಬೆಳಗ್ಗೆ 8 ಗಂಟೆಗೆ ಎದ್ದು ನರೇಂದ್ರ ನೋಡುವಾಗ ಅದಿರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ. ಅವರು ಬಂದು ಸ್ಥಳೀಯರ ಸಹಕಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮಗಳನ್ನು ಕೊಂಡು ಹೋಗಿದ್ದಾರೆ ಅದರೆ ಅಷ್ಟೋತ್ತಿಗಾಗಲೇ ಪರೀಕ್ಷಿಸಿದ ವೈದ್ಯರು ಯುವತಿ ಮೃತ ಪಟ್ಟಿರುವುದಾಗಿ ಧೃಡಪಡಿಸಿದ್ದಾರೆ. ಈ ಬಗ್ಗೆ ಯುವತಿಯ ತಂದೆ ದಾಸ್ ಅವರು ಯಾವುದೋ ಕಾರಣಕ್ಕಾಗಿ ಮಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಯುವತಿಯ ಮೊಬೈಲ್ ವಿವರಗಳನ್ನು ಪರಿಶೀಲನೆ ನಡೆಸುತಿದ್ದಾರೆ.

Related posts

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya
error: Content is protected !!