37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

ಅಳದಂಗಡಿ: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನಾ ಸಮಾರಂಭವು ಜೂ.21 ರಂದು ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯಿತು.


ನೂತನ ಕಟ್ಟಡದ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾ. ಅಧ್ಯಕ್ಷೆ ಸುಚರಿತ ಶೆಟ್ಟಿ ಉದ್ಘಾಟಿಸಿ, ಶುಭಹಾರೈಸಿದರು. ಸೂಳಬೆಟ್ಟು ಹಾ.ಉ.ಸ.ಸ ಅಧ್ಯಕ್ಷ ನಿರಂಜನ ಜೋಶಿ ಸಭಾಧ್ಯಕ್ಷತೆ ವಹಿಸಿದ್ದರು.

ಕಚೇರಿ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾ. ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಆಡಳಿತ ಕೊಠಡಿಯ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾ. ನಿರ್ದೇಶಕಿ ಸವಿತಾ ಎನ್ ಶೆಟ್ಟಿ, ಪಶು ಆಹಾರ ಗೋದಾಮುವಿನ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾ. ವ್ಯವಸ್ಥಾಪಕ ನಿರ್ದೇಶಕ ಡಿ ಅಶೋಕ್ ನೆರವೇರಿಸಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ ಯೋಜನಾಧಿಕಾರಿ ದಯಾನಂದ ಪೂಜಾರಿ ಪಿ, ಮಂಗಳೂರು ದ.ಕ.ಸ.ಹಾ. ಉಪವ್ಯವಸ್ಥಾಪಕರು ಸತೀಶ್ ಕೆ. ರಾವ್, ಮಂಗಳೂರು ತಾಂತ್ರಿಕ ವಿಭಾಗ ದ.ಕಸ.ಹಾ ಒಕ್ಕೂಟದ ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್, ಅಳದಂಗಡಿ ಪ್ರಾ.ಕೃ.ಪ.ಸ.ಸಂ ಅಧ್ಯಕ್ಷ ಶಿವಭಟ್ ಕಟ್ಟೂರು, ಮಂಗಳೂರು ದ.ಕ.ಸ.ಹಾ. ಉಪವ್ಯವಸ್ಥಾಪಕ ಚಂದ್ರಶೇಖರ್ ಭಟ್, ಮಂಗಳೂರು ದ.ಕ.ಸ.ಹಾ. ಒಕ್ಕೂಟ ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರಾ, ಸಿಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸೂಳಬೆಟ್ಟು ಹಾ.ಉ.ಸ.ಸಂ ಉಪಾಧ್ಯಕ್ಷೆ ವನಿತಾ , ನಿರ್ದೇಶಕರುಗಳಾದ ಮೋಹನ ಹೆಗ್ಡೆ, ಹರೀಶ್ ಪೂಜಾರಿ, ಪ್ರವೀಣಚಂದ್ರ ಮೆಹೆಂದಳೆ, ಪ್ರಮೋದ ಪೂಜಾರಿ, ಜಗನ್ನಾಥ, ಆನಂದ ಪೂಜಾರಿ, ಸುಶೀಲಾ, ರೀಟಾ ಡಿಸೋಜ, ಆನಂದ ಪ್ರಕಾಶ ಕುಟಿನ್ಹಾ, ಹರೀಶ್ ಮಡಿವಾಳ, ಯಶೋಧ, ಹಾಲು ಪರೀಕ್ಷಕಿ ಸುಜಾತ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕು| ಸೌಮ್ಯ ಪ್ರಾರ್ಥಿಸಿ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಚೈತ್ರಾ ವರದಿ ವಾಚಿಸಿದರು. ಹರೀಶ್ ದೇವಾಡಿಗ ಬಳಂಜ ನಿರೂಪಿಸಿದರು.

Related posts

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!