March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಬೆಳ್ತಂಗಡಿ: ವೇಣೂರು ಗ್ರಾಮದ ಗುಂಡೂರಿನ ನಿವಾಸಿ ಅನುಷಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ವೇಣೂರು ಸರ್ಕಾರಿ ಆಸ್ಪತ್ರೆ ಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ 108 ಆಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಅನುಷಾರವರಿಗೆ ಮೂತ್ರ ಸೊಂಕಿನ ಸಮಸ್ಯೆ ಇದೆ ಎಂದು ಸಮುದಾಯ ಆರೋಗ್ಯ ಕೇಂದ್ರ ವೇಣೂರು ಇಲ್ಲಿಂದ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗ್ಬೇಕು ಎಂದು ಎಮರ್ಜೆನ್ಸಿ ಕರೆ ಬಂದಿದ್ದ ಸಂದರ್ಭ ತಕ್ಷಣ ಕಾರ್ಯ ಪ್ರವೃತ್ತ ರಾದ ಬೆಳ್ತಂಗಡಿ 108 ಆಂಬುಲೆನ್ಸ್ ಸಿಬ್ಬಂದಿಗಳು ವೇಣೂರು ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗುವಷ್ಟರಲ್ಲಿ ರೋಗಿಯ ಚಲನ ವಲನ ಗಮನಿಸಿದ ತುರ್ತು ವೈದ್ಯಕೀಯ ತಜ್ಞ ಕೇಶವ. ಕೆ. ಅವರು ಆಂಬುಲೆನ್ಸ್ ಮಂಗಳೂರಿನ ಪಡೀಲ್ ತಲುಪುತಿದ್ದಂತೆ ಆಂಬುಲೆನ್ಸ್ ನಲ್ಲಿಯೇ ಬಹಳ ಕ್ಲಿಷ್ಟಕರವಾದ ಹೆರಿಗೆಯನ್ನು ಮಾಡಿ ಮಗುವನ್ನು ಮತ್ತು ತಾಯಿಯನ್ನು ಮಂಗಳೂರಿನ ಸರಕಾರಿ ಲೇಡಿಗೊಶನ್ ಆಸ್ಪತ್ರೆಗೆ ಬಹಳ ಸುರಕ್ಷಿತವಾಗಿ ದಾಖಲಿಸಿದರು.

ಕೇಶವ ಕೆ ಇವರು ಮಾಡಿದ ಸುರಕ್ಷಿತ 60ನೇ ಆಂಬುಲೆನ್ಸ್ ಹೆರಿಗೆಯಾಗಿರುತ್ತದೆ. ಬೆಳ್ತಂಗಡಿಗೆ ಹೊಸದಾಗಿ ಆಯ್ಕೆಗೊಂಡಿರುವ ಎಮರ್ಜೆನ್ಸಿ (ಪೈಲೆಟ್) ಚಾಲಕ ಮಂಜುನಾಥ್ ಎಚ್. ಕೆ. ಅವರು ಸಹಕರಿಸಿದರು.

Related posts

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!