July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಬೆಳ್ತಂಗಡಿ: ವೇಣೂರು ಗ್ರಾಮದ ಗುಂಡೂರಿನ ನಿವಾಸಿ ಅನುಷಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ವೇಣೂರು ಸರ್ಕಾರಿ ಆಸ್ಪತ್ರೆ ಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ 108 ಆಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಅನುಷಾರವರಿಗೆ ಮೂತ್ರ ಸೊಂಕಿನ ಸಮಸ್ಯೆ ಇದೆ ಎಂದು ಸಮುದಾಯ ಆರೋಗ್ಯ ಕೇಂದ್ರ ವೇಣೂರು ಇಲ್ಲಿಂದ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗ್ಬೇಕು ಎಂದು ಎಮರ್ಜೆನ್ಸಿ ಕರೆ ಬಂದಿದ್ದ ಸಂದರ್ಭ ತಕ್ಷಣ ಕಾರ್ಯ ಪ್ರವೃತ್ತ ರಾದ ಬೆಳ್ತಂಗಡಿ 108 ಆಂಬುಲೆನ್ಸ್ ಸಿಬ್ಬಂದಿಗಳು ವೇಣೂರು ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗುವಷ್ಟರಲ್ಲಿ ರೋಗಿಯ ಚಲನ ವಲನ ಗಮನಿಸಿದ ತುರ್ತು ವೈದ್ಯಕೀಯ ತಜ್ಞ ಕೇಶವ. ಕೆ. ಅವರು ಆಂಬುಲೆನ್ಸ್ ಮಂಗಳೂರಿನ ಪಡೀಲ್ ತಲುಪುತಿದ್ದಂತೆ ಆಂಬುಲೆನ್ಸ್ ನಲ್ಲಿಯೇ ಬಹಳ ಕ್ಲಿಷ್ಟಕರವಾದ ಹೆರಿಗೆಯನ್ನು ಮಾಡಿ ಮಗುವನ್ನು ಮತ್ತು ತಾಯಿಯನ್ನು ಮಂಗಳೂರಿನ ಸರಕಾರಿ ಲೇಡಿಗೊಶನ್ ಆಸ್ಪತ್ರೆಗೆ ಬಹಳ ಸುರಕ್ಷಿತವಾಗಿ ದಾಖಲಿಸಿದರು.

ಕೇಶವ ಕೆ ಇವರು ಮಾಡಿದ ಸುರಕ್ಷಿತ 60ನೇ ಆಂಬುಲೆನ್ಸ್ ಹೆರಿಗೆಯಾಗಿರುತ್ತದೆ. ಬೆಳ್ತಂಗಡಿಗೆ ಹೊಸದಾಗಿ ಆಯ್ಕೆಗೊಂಡಿರುವ ಎಮರ್ಜೆನ್ಸಿ (ಪೈಲೆಟ್) ಚಾಲಕ ಮಂಜುನಾಥ್ ಎಚ್. ಕೆ. ಅವರು ಸಹಕರಿಸಿದರು.

Related posts

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!