23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ಬದುಕಿನಲ್ಲಿ ಸಿಕ್ಕಿದ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಿ, ಫ್ಯಾಷನ್ ಯುಗದಲ್ಲಿ ಹೊಸತನಕ್ಕೆ ಉತ್ತಮ ಅವಕಾಶ ಇದೆ, ನಿಮ್ಮ ಕೆಲಸದಲ್ಲಿ ಹೊಸತನಕ್ಕೆ ಹೆಚ್ಚು ಆದ್ಯತೆ ಇರಲಿ, ಗ್ರಾಹಕರು ಅಪೇಕ್ಷೆಗೆ ಅನುಗುಣವಾಗಿ ಕೆಲಸ ಮಾಡಿ ಕೊಡುವಂತಹ ಪ್ರಯತ್ನ ಮಾಡಿ, ಸಾದನೆಯ ಮೂಲಕ ನಿಮ್ಮನ್ನು ಗುರುತಿಸಿಕೊಳ್ಳಿ, ರುಡ್‌ಸೆಟ್ ಸಂಸ್ಥೆಯು ಏನೂ ಪ್ರತಿಫಲ ಅಪೇಕ್ಷೆ ಇಲ್ಲದೆ, ಯುವ ಯುವ ಜನತೆಯು ಆರ್ಥಿಕ ಸಬಲರಾಗುವ ಉದ್ದೇಶದಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ಈ ಸಂಸ್ಥೆಯಲ್ಲಿ ಪಡೆದ ಈ ತರಬೇತಿಯನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಿ ಎಂದು ಧೀಮತಿ ಮಹಿಳಾ ಸಮಾಜದ ಸ್ಥಾಪಕ ಅಧ್ಯಕ್ಷೆ ಶ್ರೀಮತಿ ಸೋನಿಯಾವರ್ಮ ರವರು ಅಭಿಪ್ರಾಯ ಪಟ್ಟರು.

ಅವರು ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಆಧುನಿಕ ಯುಗದಲ್ಲಿ ಎಂಬ್ರಾಯ್ಡರಿ ಹೆಚ್ಚು ಬೇಡಿಕೆ ಇರುವಂತಹ ಉದ್ಯೋಗ ಕ್ಷೇತ್ರವಾಗಿದ್ದು, ಮಹಿಳೆಯರು ಮನೆಯಲ್ಲೇ ಸ್ವ ಉದ್ಯೋಗ ಪ್ರಾರಂಭಿಸಿ, ಉತ್ತಮ ಆದಾಯ ಗಳಿಸಲು ಅವಕಾಶ ಇದೆ. ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ ರವರು ಅಧ್ಯಕ್ಷ ಸ್ಥಾನ ವಹಿಸಿದ್ದರು, ಸಂಸ್ಥೆಯ ನಿರ್ದೇಶಕರಾದ ಎಮ್. ಸುರೇಶ್ ರವರು ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕರಾದ ಶ್ರೀಮತಿ ಅನಸೂಯರವರು ಕಾರ್ಯಕ್ರಮ ನಿರ್ವಹಿಸಿದರೆ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಧನ್ಯವಾದವಿತ್ತರು.

ಕೆಲವು ಶಿಭಿರಾರ್ಥಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದರು. 35 ಜನ ಶಿಬಿರಾರ್ಥಿಗಳು 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!