24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

ಉಜಿರೆ : “ಸಂಸ್ಕೃತಿ, ಸಂಸ್ಕಾರ, ಜೀವನ ಮೌಲ್ಯ, ಕೌಶಲದ ಅಭಿವೃದ್ಧಿಗೆ ಯಕ್ಷಗಾನದ ಪಾತ್ರ ಮಹತ್ವವಿದೆ” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ ಹೇಳಿದರು.ಇ

ವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆ ಇಲ್ಲಿ ಜೂ.23 ರಂದು ನಡೆದ ‘ಯಕ್ಷಗಾನ ತರಬೇತಿ’ ತರಗತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಮತ್ತು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.”ಬುದ್ಧಿಯನ್ನು ತಿದ್ದುವ ಕಲೆ ಹಾಗೂ ಸಂಸ್ಕಾರವನ್ನು ಬೆಳೆಸುವ ಕಲೆಯಾಗಿದೆ” ಎಂದು ಯಕ್ಷಗಾನ ನಾಟ್ಯಗುರುಗಳಾದ ಲಕ್ಷ್ಮಣ ಗೌಡ ಇವರು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯ ಶಿಕ್ಷಕರಾದ ಮನಮೋಹನ್ ನಾಯಕ್ ಅಧ್ಯಕ್ಷೀಯ ನುಡಿಗಳನ್ನಾಡಿದರು.

ವೇದಿಕೆಯಲ್ಲಿ ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಮುಖ್ಯ ಶಿಕ್ಷಕಿ ಪರಿಮಳ ಇವರು ಉಪಸ್ಥಿತರಿದ್ದರು. ಯಕ್ಷಗಾನ ತರಬೇತಿ ತರಗತಿಯ ಸಂಯೋಜಕರಾದ ಶಿಕ್ಷಕ ಕಿರಣ್ ರಾಜ್ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya
error: Content is protected !!