April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಬೆಳ್ತಂಗಡಿ: ವೇಣೂರು ಗ್ರಾಮದ ಗುಂಡೂರಿನ ನಿವಾಸಿ ಅನುಷಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ವೇಣೂರು ಸರ್ಕಾರಿ ಆಸ್ಪತ್ರೆ ಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ 108 ಆಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಅನುಷಾರವರಿಗೆ ಮೂತ್ರ ಸೊಂಕಿನ ಸಮಸ್ಯೆ ಇದೆ ಎಂದು ಸಮುದಾಯ ಆರೋಗ್ಯ ಕೇಂದ್ರ ವೇಣೂರು ಇಲ್ಲಿಂದ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗ್ಬೇಕು ಎಂದು ಎಮರ್ಜೆನ್ಸಿ ಕರೆ ಬಂದಿದ್ದ ಸಂದರ್ಭ ತಕ್ಷಣ ಕಾರ್ಯ ಪ್ರವೃತ್ತ ರಾದ ಬೆಳ್ತಂಗಡಿ 108 ಆಂಬುಲೆನ್ಸ್ ಸಿಬ್ಬಂದಿಗಳು ವೇಣೂರು ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗುವಷ್ಟರಲ್ಲಿ ರೋಗಿಯ ಚಲನ ವಲನ ಗಮನಿಸಿದ ತುರ್ತು ವೈದ್ಯಕೀಯ ತಜ್ಞ ಕೇಶವ. ಕೆ. ಅವರು ಆಂಬುಲೆನ್ಸ್ ಮಂಗಳೂರಿನ ಪಡೀಲ್ ತಲುಪುತಿದ್ದಂತೆ ಆಂಬುಲೆನ್ಸ್ ನಲ್ಲಿಯೇ ಬಹಳ ಕ್ಲಿಷ್ಟಕರವಾದ ಹೆರಿಗೆಯನ್ನು ಮಾಡಿ ಮಗುವನ್ನು ಮತ್ತು ತಾಯಿಯನ್ನು ಮಂಗಳೂರಿನ ಸರಕಾರಿ ಲೇಡಿಗೊಶನ್ ಆಸ್ಪತ್ರೆಗೆ ಬಹಳ ಸುರಕ್ಷಿತವಾಗಿ ದಾಖಲಿಸಿದರು.

ಕೇಶವ ಕೆ ಇವರು ಮಾಡಿದ ಸುರಕ್ಷಿತ 60ನೇ ಆಂಬುಲೆನ್ಸ್ ಹೆರಿಗೆಯಾಗಿರುತ್ತದೆ. ಬೆಳ್ತಂಗಡಿಗೆ ಹೊಸದಾಗಿ ಆಯ್ಕೆಗೊಂಡಿರುವ ಎಮರ್ಜೆನ್ಸಿ (ಪೈಲೆಟ್) ಚಾಲಕ ಮಂಜುನಾಥ್ ಎಚ್. ಕೆ. ಅವರು ಸಹಕರಿಸಿದರು.

Related posts

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya
error: Content is protected !!