July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಬೆಳ್ತಂಗಡಿ: ವೇಣೂರು ಗ್ರಾಮದ ಗುಂಡೂರಿನ ನಿವಾಸಿ ಅನುಷಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ವೇಣೂರು ಸರ್ಕಾರಿ ಆಸ್ಪತ್ರೆ ಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ 108 ಆಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಅನುಷಾರವರಿಗೆ ಮೂತ್ರ ಸೊಂಕಿನ ಸಮಸ್ಯೆ ಇದೆ ಎಂದು ಸಮುದಾಯ ಆರೋಗ್ಯ ಕೇಂದ್ರ ವೇಣೂರು ಇಲ್ಲಿಂದ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗ್ಬೇಕು ಎಂದು ಎಮರ್ಜೆನ್ಸಿ ಕರೆ ಬಂದಿದ್ದ ಸಂದರ್ಭ ತಕ್ಷಣ ಕಾರ್ಯ ಪ್ರವೃತ್ತ ರಾದ ಬೆಳ್ತಂಗಡಿ 108 ಆಂಬುಲೆನ್ಸ್ ಸಿಬ್ಬಂದಿಗಳು ವೇಣೂರು ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗುವಷ್ಟರಲ್ಲಿ ರೋಗಿಯ ಚಲನ ವಲನ ಗಮನಿಸಿದ ತುರ್ತು ವೈದ್ಯಕೀಯ ತಜ್ಞ ಕೇಶವ. ಕೆ. ಅವರು ಆಂಬುಲೆನ್ಸ್ ಮಂಗಳೂರಿನ ಪಡೀಲ್ ತಲುಪುತಿದ್ದಂತೆ ಆಂಬುಲೆನ್ಸ್ ನಲ್ಲಿಯೇ ಬಹಳ ಕ್ಲಿಷ್ಟಕರವಾದ ಹೆರಿಗೆಯನ್ನು ಮಾಡಿ ಮಗುವನ್ನು ಮತ್ತು ತಾಯಿಯನ್ನು ಮಂಗಳೂರಿನ ಸರಕಾರಿ ಲೇಡಿಗೊಶನ್ ಆಸ್ಪತ್ರೆಗೆ ಬಹಳ ಸುರಕ್ಷಿತವಾಗಿ ದಾಖಲಿಸಿದರು.

ಕೇಶವ ಕೆ ಇವರು ಮಾಡಿದ ಸುರಕ್ಷಿತ 60ನೇ ಆಂಬುಲೆನ್ಸ್ ಹೆರಿಗೆಯಾಗಿರುತ್ತದೆ. ಬೆಳ್ತಂಗಡಿಗೆ ಹೊಸದಾಗಿ ಆಯ್ಕೆಗೊಂಡಿರುವ ಎಮರ್ಜೆನ್ಸಿ (ಪೈಲೆಟ್) ಚಾಲಕ ಮಂಜುನಾಥ್ ಎಚ್. ಕೆ. ಅವರು ಸಹಕರಿಸಿದರು.

Related posts

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya
error: Content is protected !!